ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ: ಮಮತಾ ಬ್ಯಾನರ್ಜಿ

Last Updated 22 ಜುಲೈ 2020, 8:08 IST
ಅಕ್ಷರ ಗಾತ್ರ

ಕೋಲ್ಕತ್ತ: ಗಾಜಿಯಾಬಾದ್‌ನ ಪತ್ರಕರ್ತ ವಿಕ್ರಂ ಜೋಶಿ ಹತ್ಯೆ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬುಧವಾರ ಪ್ರತಿಕ್ರಿಯಿಸಿರುವ ಅವರು, ‘ದೇಶದಲ್ಲಿ ಭಯದ ವಾತಾವರಣ ಮನೆ ಮಾಡಿದೆ. ಜನರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ’ ಎಂದಿದ್ದಾರೆ.

ಸೋಮವಾರ ರಾತ್ರಿ ಹಲ್ಲೆಕೋರರು ಪತ್ರಕರ್ತ ವಿಕ್ರಂ ಅವರ ಮೇಲೆ ಗುಂಡು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಬೆಳಗ್ಗೆ ಆಸ್ಪ‍ತ್ರೆಯಲ್ಲಿ ಕೊನೆ ಉಸಿರೆಳೆದರು.

ಈ ಕುರಿತು ಸಂತಾಪ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ, ’ಧೈರ್ಯಶಾಲಿ ಪತ್ರಕರ್ತ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಅವರು ತನ್ನಸೋದರ ಸೊಸೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರ ಪರಿಣಾಮವಾಗಿ ಹತ್ಯೆಕೋರರು ಅವರ ಮೇಲೆ ಗುಂಡು ಹಾರಿಸಿದ್ದಾರೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT