ಈ ಕುರಿತು ಸಂತಾಪ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ, ’ಧೈರ್ಯಶಾಲಿ ಪತ್ರಕರ್ತ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಅವರು ತನ್ನಸೋದರ ಸೊಸೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರ ಪರಿಣಾಮವಾಗಿ ಹತ್ಯೆಕೋರರು ಅವರ ಮೇಲೆ ಗುಂಡು ಹಾರಿಸಿದ್ದಾರೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.