ರಾಮ ಮಂದಿರಕ್ಕಾಗಿ ನಡೆದ ಹೋರಾಟದೊಂದಿಗೆ ನಿಕಟ ಸಂಬಂಧ ಹೊಂದಿರುವ ಬಿಜೆಪಿ ಹಿರಿಯ ನಾಯಕ ವಿನಯ್ ಕಟಿಯಾರ್ ಅವರು, ‘ದೇವಾಲಯದ ಭೂಮಿ ಪೂಜೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5ರಂದು ಅಯೋಧ್ಯೆಗೆ ಆಗಮಿಸಲಿದ್ದು, ಕಾರ್ಯಕ್ರಮದ ಸಿದ್ಧತೆಗಳನ್ನು ನೋಡಿಕೊಳ್ಳುವುದು ರಾಜ್ಯದ ಮುಖ್ಯಮಂತ್ರಿಯ ಜವಾಬ್ದಾರಿಯಾಗಿದೆ’ ಎಂದು ಹೇಳಿದ್ದಾರೆ.