ಲಖನೌ:ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ,ಜುಲೈ 24 ರಂದು ಬಿಜೆಪಿ ಹಿರಿಯ ಮುಖಂಡ ಎಲ್.ಕೆ ಅಡ್ವಾಣಿ ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ವಿಶೇಷ ಸಿಬಿಐ ನ್ಯಾಯಾಲಯ ಸೋಮವಾರ ತಿಳಿಸಿದೆ.
ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಕಲಂ 313ರ ಅನುಸಾರ ಅವರ ಹೇಳಿಕೆಯನ್ನು ವಿಡಿಯೊಕಾನ್ಫರೆನ್ಸ್ ಮೂಲಕ ದಾಖಲಿಸಲಾಗುತ್ತದೆ.
ಪ್ರಕರಣದ ಇತರ ಆರೋಪಿಗಳಾಗಿರುವ ಶಿವಸೇನಾ ಮುಖಂಡ ಸತೀಶ್ ಪ್ರಧಾನ್ ವಿಚಾರಣೆ ಜುಲೈ 22ರಂದು ಮತ್ತುಜುಲೈ 23ರಂದು ಬಿಜೆಪಿಯ ಹಿರಿಯ ಮುಖಂಡಮುರಳಿ ಮನೋಹರಜೋಷಿತಮ್ಮ ಹೇಳಿಕೆಗಳನ್ನು ವಿಡಿಯೊ ಮೂಲಕ ದಾಖಲಿಸುವ ಸಾಧ್ಯತೆ ಇದೆ.