ಜಾಮೀನು ಅರ್ಜಿಯ ವಿಚಾರಣೆ ನಡೆಸುತ್ತಾ, ಮೇ 27ರಂದು ದೆಹಲಿ ಹೈಕೋರ್ಟ್ ಎನ್ಐಎ ವಿರುದ್ಧ ಮಾಡಿದ್ದ ಪ್ರತಿಕೂಲ ಟೀಕೆಗಳನ್ನು ಸಹ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ನವಲಖ ಅವರ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಬಾಕಿ ಇದ್ದರೂ, ಅವರನ್ನು ತಿಹಾರ್ ಜೈಲಿನಿಂದ ಮುಂಬೈಗೆ ಸ್ಥಳಾಂತರಿಸುವಲ್ಲಿ ತರಾತುರಿಯಲ್ಲಿ ವರ್ತಿಸಿದ್ದಕ್ಕಾಗಿ ಎನ್ಐಎಯನ್ನು ಟೀಕಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಕೆಲವು ದಿನಗಳ ಹಿಂದೆ ತಡೆಯಾಜ್ಞೆ ನೀಡಿತ್ತು.