‘ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಗಲ್ಲಿಗೇರಿಸಲಾಗುತ್ತಿದೆ. ಇಲ್ಲಿಯವರೆಗೆ ರಾಜಕೀಯ ಕಾರ್ಯಕರ್ತರ ಕೊಲೆ ಮಾಡಲಾಗುತ್ತಿತ್ತು. ಆದರೆ, ಈಗ ಚುನಾಯಿತ ನಾಯಕರನ್ನು ಕೊಲೆ ಮಾಡಿ, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ. ರಾಜ್ಯದಲ್ಲಿ ಅರಾಜಕತೆ ಮೇಲುಗೈ ಸಾಧಿಸಿದೆ. ಸರ್ಕಾರಕ್ಕೆ ಅಧಿಕಾರದಲ್ಲಿ ಇರುವ ಯಾವುದೇ ಹಕ್ಕಿಲ್ಲ. ವಿಧಾನಸಭೆಯನ್ನು ತಕ್ಷಣವೇ ವಿಸರ್ಜಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ’ ಎಂದು ವಿಜಯವರ್ಗಿಯಾ ಹೇಳಿದ್ದಾರೆ.