‘ಸ್ಥಳೀಯ ಟಿಎಂಸಿ ನಾಯಕರು ತಮ್ಮ ಪಕ್ಷಕ್ಕೆ ಸೇರುವಂತೆ ಪೂರ್ಣಚಂದ್ರ ಅವರನ್ನು ಒತ್ತಾಯಿಸುತ್ತಿದ್ದರು. ಆದರೆ, ಅವರು ನಿರಾಕರಿಸಿದ್ದರು. ಇಂದು ಟಿಎಂಸಿ ನಾಯಕರೊಂದಿಗೆ ಸಭೆಯೂ ನಡೆದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಮಗೆ ನ್ಯಾಯಬೇಕು,’ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.