ಈ ಬಾರಿ ಹಬ್ಬದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಮುಂತಾದ ಎಚ್ಚರಿಕೆಯ ಕ್ರಮಗಳನ್ನು ಪಾಲಿಸಬೇಕು, ಕೊರೊನಾ ಸೋಂಕು ಹರಡುವಿಕೆಗೆ ಕಾರಣವಾಗಬಲ್ಲ ಯಾವುದೇ ಕೃತ್ಯ ನಡೆಸಬಾರದು. ಮನೆಗಳಲ್ಲಿ ಪೂಜಿಸಿದ ಮೂರ್ತಿಗಳ ಮೆರವಣಿಗೆಯನ್ನು ಸಾಧ್ಯವಾದಷ್ಟು ಮಟ್ಟಿಗೆ ಕೈಬಿಡಬೇಕು. ಮೂರ್ತಿ ವಿಸರ್ಜನಾ ಸ್ಥಳಕ್ಕೆ ಮಕ್ಕಳು ಮತ್ತು ವೃದ್ಧರನ್ನು ಕರೆತರಬಾರದು. ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ 1897ರ ಸಾಂಕ್ರಾಮಿಕ ಪಿಡುಗು ಕಾಯ್ದೆ, 2005ರ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಐಪಿಸಿ ಅಡಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪಾಲಿಕೆ ಎಚ್ಚರಿಕೆ ನೀಡಿದೆ.