ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 24ರಿಂದ ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ

ಉದ್ಯೋಗ ನಷ್ಟ, ಕಾರ್ಮಿಕ ಕಾನೂನುಗಳ ತಿದ್ದುಪಡಿಗೆ ವಿರೋಧ
Last Updated 8 ಜುಲೈ 2020, 16:44 IST
ಅಕ್ಷರ ಗಾತ್ರ

ನವದೆಹಲಿ: ಉದ್ಯೋಗ ನಷ್ಟ, ಕಾರ್ಮಿಕ ಕಾನೂನುಗಳ ತಿದ್ದುಪಡಿ ಮತ್ತು ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಭಾರತೀಯ ಮಜ್ದೂರ್ ಸಂಘವು (ಆರ್‌ಎಸ್‌ಎಸ್‌ನ ಕಾರ್ಮಿಕ ಸಂಘ) ಜುಲೈ 24ರಿಂದ ಒಂದು ವಾರ ಕಾಲ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಪ್ರತಿಭಟನೆಯ ಸಮಯದಲ್ಲಿ ಬಿಎಂಎಸ್‌ನ ಕಾರ್ಯಕರ್ತರು ಪ್ರತಿ ವಲಯದ ತಳಮಟ್ಟದ ಕಾರ್ಮಿಕರನ್ನು ಸಂಪರ್ಕಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇತ್ತೀಚಿನ ನೀತಿಗಳ ತೀವ್ರ ಪರಿಣಾಮಗಳ ಬಗ್ಗೆ ತಿಳಿವಳಿಕೆ ಮೂಡಿಸಲಿದ್ದಾರೆ. ಪ್ರತಿದಿನವೂ ಒಂದೊಂದು ಘಟಕವು ’ಸರ್ಕಾರ್ ಜಾಗೋ ಸಪ್ತಾಹ’ ನಡೆಸಲಿದೆ ಎಂದು ಬಿಎಂಎಸ್ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT