<p class="title"><strong>ಮುಂಬೈ:</strong> ಪ್ರಜಾಪ್ರಭುತ್ವದ ಮಾರ್ಗದಲ್ಲಿ ಆಯ್ಕೆಯಾಗಿರುವ ಸರ್ಕಾರವನ್ನು ಹಣ ಬಳಸಿ ಪದಚ್ಯುತಗೊಳಿಸುವುದು ವಿಶ್ವಾಸಘಾತುಕತನ ಹಾಗೂ ಫೋನ್ ಕದ್ದಾಲಿಸುವುದು ಒಬ್ಬರ ವ್ಯಕ್ತಿಗತ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂದು ಶಿವಸೇನೆಯು ರಾಜಸ್ಥಾನದ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದೆ.</p>.<p class="title">'ಈ ಎರಡರಲ್ಲಿ ಯಾವುದು ದೊಡ್ಡ ಅಪರಾಧ ಎಂಬುದು ತೀರ್ಮಾನವಾಗಬೇಕಿದೆ' ಎಂದು ಶಿವಸೇನೆ ತನ್ನ ಮುಖವಾಣಿ 'ಸಾಮ್ನಾ'ದಲ್ಲಿನ ಸಂಪಾದಕೀಯದಲ್ಲಿ ಅಭಿಪ್ರಾಯಪಟ್ಟಿದೆ. ರಾಜಸ್ಥಾನದ ಟೆಲಿಫೋನ್ ಕದ್ದಾಲಿಕೆ ಪ್ರಕರಣ ಹಲವರ ಮನಸ್ಥಿತಿಯನ್ನು ಬೆತ್ತಲಾಗಿಸಿದೆ ಎಂದೂ ಟೀಕಿಸಿದೆ.</p>.<p class="title">ಟೆಲಿಫೋನ್ ಸಂಭಾಷಣೆಯನ್ನು ಮೌನವಾಗಿ ಕೇಳಿಸಿಕೊಂಡರೆ ಹಾಗೂ ರಾಹುಲ್ಗಾಂಧಿ ಅವರನ್ನು ತಲುಪಿರುವ ಮಾತುಗಳನ್ನು ಗಮನಿಸಿದರೆ ಹಲವು ಸಂಗತಿಗಳುತಿಳಿಯುತ್ತವೆ. ರಾಹುಲ್ ಗಾಂಧಿ ಅವರು ಸರಿಯಾಗಿ ಕಾರ್ಯನಿರ್ವಹಿಸಲೂ ಕೆಲವರು ಅವಕಾಶ ನೀಡುತ್ತಿಲ್ಲ ಎಂದೂ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p class="title">ಟೆಲಿಫೋನ್ ಕದ್ದಾಲಿಕೆ ಆರೋಪ ಕುರಿತಂತೆ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರವು ರಾಜಸ್ಥಾನ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಶಿವಸೇನೆಯ ಈ ಅಭಿಪ್ರಾಯವು ಗಮನಸೆಳೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ:</strong> ಪ್ರಜಾಪ್ರಭುತ್ವದ ಮಾರ್ಗದಲ್ಲಿ ಆಯ್ಕೆಯಾಗಿರುವ ಸರ್ಕಾರವನ್ನು ಹಣ ಬಳಸಿ ಪದಚ್ಯುತಗೊಳಿಸುವುದು ವಿಶ್ವಾಸಘಾತುಕತನ ಹಾಗೂ ಫೋನ್ ಕದ್ದಾಲಿಸುವುದು ಒಬ್ಬರ ವ್ಯಕ್ತಿಗತ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂದು ಶಿವಸೇನೆಯು ರಾಜಸ್ಥಾನದ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದೆ.</p>.<p class="title">'ಈ ಎರಡರಲ್ಲಿ ಯಾವುದು ದೊಡ್ಡ ಅಪರಾಧ ಎಂಬುದು ತೀರ್ಮಾನವಾಗಬೇಕಿದೆ' ಎಂದು ಶಿವಸೇನೆ ತನ್ನ ಮುಖವಾಣಿ 'ಸಾಮ್ನಾ'ದಲ್ಲಿನ ಸಂಪಾದಕೀಯದಲ್ಲಿ ಅಭಿಪ್ರಾಯಪಟ್ಟಿದೆ. ರಾಜಸ್ಥಾನದ ಟೆಲಿಫೋನ್ ಕದ್ದಾಲಿಕೆ ಪ್ರಕರಣ ಹಲವರ ಮನಸ್ಥಿತಿಯನ್ನು ಬೆತ್ತಲಾಗಿಸಿದೆ ಎಂದೂ ಟೀಕಿಸಿದೆ.</p>.<p class="title">ಟೆಲಿಫೋನ್ ಸಂಭಾಷಣೆಯನ್ನು ಮೌನವಾಗಿ ಕೇಳಿಸಿಕೊಂಡರೆ ಹಾಗೂ ರಾಹುಲ್ಗಾಂಧಿ ಅವರನ್ನು ತಲುಪಿರುವ ಮಾತುಗಳನ್ನು ಗಮನಿಸಿದರೆ ಹಲವು ಸಂಗತಿಗಳುತಿಳಿಯುತ್ತವೆ. ರಾಹುಲ್ ಗಾಂಧಿ ಅವರು ಸರಿಯಾಗಿ ಕಾರ್ಯನಿರ್ವಹಿಸಲೂ ಕೆಲವರು ಅವಕಾಶ ನೀಡುತ್ತಿಲ್ಲ ಎಂದೂ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p class="title">ಟೆಲಿಫೋನ್ ಕದ್ದಾಲಿಕೆ ಆರೋಪ ಕುರಿತಂತೆ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರವು ರಾಜಸ್ಥಾನ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಶಿವಸೇನೆಯ ಈ ಅಭಿಪ್ರಾಯವು ಗಮನಸೆಳೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>