ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.24ಕ್ಕೆ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಉಪಚುನಾವಣೆ

Last Updated 30 ಜುಲೈ 2020, 9:54 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶ ಮತ್ತು ಕೇರಳಕ್ಕೆ ಸಂಬಂಧಿಸಿ ಖಾಲಿ ಇರುವ ಎರಡು ರಾಜ್ಯಸಭಾ ಸ್ಥಾನಗಳಿಗೆ ಆ.24ರಂದು ಉಪಚುನಾವಣೆ ನಡೆಯಲಿದೆ ಎಂದು ಗುರುವಾರ ಚುನಾವಣಾ ಆಯೋಗ ಪ್ರಕಟಿಸಿದೆ.

ರಾಜ್ಯಸಭಾ ಸದಸ್ಯರಾದ ಉತ್ತರ ಪ್ರದೇಶದ ಬೇನಿ ಪ್ರಸಾದ್ ವರ್ಮಾ ಮತ್ತು ಕೇರಳದ ಎಂ.ಪಿ ವೀರೇಂದ್ರ ಕುಮಾರ್ ಅವರ ನಿಧನರಾದ ಕಾರಣಖಾಲಿಯಾಗಿರುವ ರಾಜ್ಯಸಭಾ ಸ್ಥಾನಗಳಿಗೆ ಆ.24 ರಂದು ಉಪಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ.

ಇನ್ನೂಆ.4 ರಂದು ಉಪಚುನಾವಣೆಯ ಅಧಿಸೂಚನೆಯನ್ನು ಹೊರಡಿಸಲಾಗುವುದು. ಚುನಾವಣೆ ನಡೆದ ದಿನದಂದೇ ಮತ ಏಣಿಕೆಯು ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಬೇನಿ ಪ್ರಸಾದ್‌ ಅವರ ಅವಧಿ 2022ರಜುಲೈ ಮತ್ತು ವೀರೇಂದ್ರ ಕುಮಾರ್‌ ಅವರ ಅವಧಿಯು 2022 ಏಪ್ರಿಲ್‌ನಲ್ಲಿ ಅಂತ್ಯಗೊಳಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT