ಲಾಕ್ಡೌನ್ ಜಾರಿ ಇದ್ದಾಗ್ಯೂ ಅಂಗಡಿ ತೆರೆದಿದ್ದ ಕಾರಣಕ್ಕೆ ಜೂನ್ 19ರಂದು ಜಯರಾಜ್ ಮತ್ತು ಮಗ ಬೆನಿಕ್ಸ್ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೋವಿಲಪಟ್ಟಿ ಉಪ ಕಾರಾಗೃಹದಲ್ಲಿ ಇದ್ದಾಗಲೇ ತೀವ್ರವಾಗಿ ಅಸ್ವಸ್ಥಗೊಂಡ ತಂದೆ, ಮಗ ಜೂನ್ 23ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಆದರೆ ಇವರ ಸಾವು ಪೊಲೀಸರ ಚಿತ್ರಹಿಂಸೆಯಿಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ.