ಆಗಸ್ಟ್ 5 ರಂದು ಭೂಮಿ ಪೂಜೆ ಅಂಗವಾಗಿಮಧ್ಯಪ್ರದೇಶದ ನಿವಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ’ರಾಮ ರಾಜ’ ದೇವಾಲಯ ಹಾಗೂ ಚಿತ್ರಕೂಟದಲ್ಲಿರುವ ದೇವಾಲಯಗಳು ಸೇರಿದಂತೆ ರಾಜ್ಯದ ಎಲ್ಲ ದೇವಾಲಯಗಳಲ್ಲೂ ವಿಶೇಷ ಪೂಜೆ ನಡೆಯಲಿದೆ. ಆದರೆ, ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಯಾವ ಕಾರಣಕ್ಕೂ ಸಾರ್ವಜನಿಕರು ದೇವಾಲಯಗಳಿಗೆ ಗುಂಪು ಗುಂಪಾಗಿ ತೆರಳದೇ ಮನೆಯಲ್ಲಿದ್ದುಕೊಂಡೇ ಭೂಮಿ ಪೂಜೆ ಕಾರ್ಯಕ್ರಮದ ಭಾಗವಾಗುವಂತೆ’ ಅವರು ಮನವಿ ಮಾಡಿದ್ದಾರೆ.