ಭಯೋತ್ಪಾದನೆ ಸಂಚು ಆರೋಪದಲ್ಲಿ ಜಾಧವ್ ಅವರಿಗೆ ಪಾಕ್ ಸೇನಾ ನ್ಯಾಯಾಲಯ 2017ರ ಏಪ್ರಿಲ್ನಲ್ಲಿ ಮರಣದಂಡನೆ ಶಿಕ್ಷೆಯನ್ನು ವಿಧಿಸಿತ್ತು. ಬಳಿಕ ಭಾರತವು ಪ್ರಕರಣವನ್ನು ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವಂತೆ ಮಾಡಿತ್ತು. ಮರಣದಂಡನೆ ತೀರ್ಪಿನ ಬಗ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಜಾಧವ್ ನಿರಾಕರಿಸಿದ್ದಾರೆ ಎಂದು ಇತ್ತೀಚೆಗಷ್ಟೇ ಪಾಕಿಸ್ತಾನ ಹೇಳಿತ್ತು. ನಂತರ, ಅವರ ಜೊತೆ ಮೂರನೇ ಭೇಟಿಗೆ ಭಾರತಕ್ಕೆ ಅವಕಾಶ ಕಲ್ಪಿಸಲು ಬದ್ಧ ಎಂದೂ ಹೇಳಿತ್ತು.ಆದಾಗ್ಯೂ ಸದ್ದಿಲ್ಲದೇ, ಜಾಧವ್ ಪರ ವಾದ ಮಂಡಿಸಲು ವಕೀಲರನ್ನು ನೇಮಕ ಮಾಡುವಂತೆ ಅರ್ಜಿ ಸಲ್ಲಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ.