ಅಶೋಕ್ ಗೆಹ್ಲೋಟ್ ಅವರ ಸಹೋದರನ ಮನೆಯಲ್ಲಿ ಜಾರಿ ನಿರ್ದೇಶನಾಲವು ಬುಧವಾರ ಶೋಧ ನಡೆಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಉತ್ತರಪ್ರದೇಶದಲ್ಲಿ ‘ಗುಂಡಾರಾಜ್, ಜಂಗಲ್ರಾಜ್’ಇದೆ. ಮೋದಿ ಅವರು ಭಾರತದಲ್ಲಿ ರೇಡ್ ರಾಜ್ ನಿರ್ಮಿಸುತ್ತಿದ್ದಾರೆ. ಕಾಂಗ್ರೆಸ್ ಇದಕ್ಕೆ ಹೆದರುವುದಿಲ್ಲ. ರಾಜಸ್ಥಾನ ಸರ್ಕಾರವನ್ನು ಉರುಳಿಸುವ ಬಿಜೆಪಿಯ ಉದ್ದೇಶ ಈಡೇರಲಿಲ್ಲ. ಅದಕ್ಕಾಗಿ ಈಗ ಇ.ಡಿ. ಶೋಧ ನಡೆಸಲಾಗುತ್ತಿದೆ’ ಎಂದು ಆರೋಪಿಸಿದರು.