ಪ್ರಸ್ತುತ ಸಂಕಷ್ಟದ ಸಮಯದಲ್ಲಿ ರಾಜಕೀಯ ಅಗತ್ಯವಿರಲಿಲ್ಲ. ಕೊರೊನಾ ವೈರಸ್ ಮತ್ತು ಭಾರತ–ಚೀನಾ ಗಡಿ ಬಿಕ್ಕಟ್ಟಿಗೆ ಪರಿಹಾರಗಳನ್ನು ರೂಪಿಸುವ ಬದಲು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡುತ್ತಿದೆ. ಮರುಭೂಮಿ ರಾಜ್ಯದಲ್ಲಿ ರಾಜಕೀಯ ದುಸ್ಸಾಹಸ ಮಾಡುತ್ತಿರುವ ಬಿಜೆಪಿ, ಯಾವ ರೀತಿಯ ಸಾಧನೆ ಮಾಡುತ್ತಿದೆ. ಇಂತಹ ಕ್ರಮಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಮರುಭೂಮಿ ರೀತಿ ಮಾಡುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.