<p><strong>ಜೈಪುರ</strong>: ರಾಜಸ್ತಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.</p>.<p>ಪಕ್ಷದ ಮುಖಂಡ ಅಜಯ್ ಮಕೇನ್, ’ಕಾಂಗ್ರೆಸ್ ಶಾಸಕ ಭನ್ವರ್ಲಾಲ್ ಶರ್ಮಾ, ಶೇಖಾವತ್ ಹಾಗೂ ಸಂಜಯ್ ಜೈನ್ ನಡುವೆ ನಡೆದ ಸಂಭಾಷಣೆಯ ಆಡಿಯೊ ಟೇಪ್ಗಳಿಗೆ ಸಂಬಂಧಿಸಿದಂತೆ ಎಸಿಬಿಯು ಪ್ರಕರಣ ದಾಖಲಿಸಿದೆ‘ ಎಂದು ಹೇಳಿದ್ದಾರೆ.</p>.<p>ಆಡಿಯೊ ತುಣುಕಿನಲ್ಲಿರುವುದು ತಮ್ಮ ಧ್ವನಿಯಲ್ಲ ಎಂದುಗಜೇಂದ್ರಸಿಂಗ್ ಖೇಖಾವತ್ ಸ್ಪಷ್ಟಪಡಿಸಿದ್ದಾರೆ. ಆದರೆ, ಅವರ ಧ್ವನಿಯಲ್ಲದೇ ಇದ್ದರೆ ಧ್ವನಿ ಮಾದರಿ ನೀಡಲು ಅವರು ಏಕೆ ಹಿಂಜರಿಯುತ್ತಿದ್ದಾರೆ ಎಂದು ಮಕೇನ್ ಪ್ರಶ್ನಿಸಿದ್ದಾರೆ.</p>.<p>ಕೇಂದ್ರ ಸಚಿವರಾಗಿ ಮುಂದುವರಿಯಲು ಖೇಖಾವತ್ಗೆ ನೈತಿಕತೆಯಿಲ್ಲ. ತನಿಖೆಯಲ್ಲಿ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರು ರಾಜೀನಾಮೆ ನೀಡಬೇಕು. ಹರಿಯಾಣ ಮತ್ತು ದೆಹಲಿ ಪೊಲೀಸರು ಬಂಡಾಯ ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ತಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.</p>.<p>ಪಕ್ಷದ ಮುಖಂಡ ಅಜಯ್ ಮಕೇನ್, ’ಕಾಂಗ್ರೆಸ್ ಶಾಸಕ ಭನ್ವರ್ಲಾಲ್ ಶರ್ಮಾ, ಶೇಖಾವತ್ ಹಾಗೂ ಸಂಜಯ್ ಜೈನ್ ನಡುವೆ ನಡೆದ ಸಂಭಾಷಣೆಯ ಆಡಿಯೊ ಟೇಪ್ಗಳಿಗೆ ಸಂಬಂಧಿಸಿದಂತೆ ಎಸಿಬಿಯು ಪ್ರಕರಣ ದಾಖಲಿಸಿದೆ‘ ಎಂದು ಹೇಳಿದ್ದಾರೆ.</p>.<p>ಆಡಿಯೊ ತುಣುಕಿನಲ್ಲಿರುವುದು ತಮ್ಮ ಧ್ವನಿಯಲ್ಲ ಎಂದುಗಜೇಂದ್ರಸಿಂಗ್ ಖೇಖಾವತ್ ಸ್ಪಷ್ಟಪಡಿಸಿದ್ದಾರೆ. ಆದರೆ, ಅವರ ಧ್ವನಿಯಲ್ಲದೇ ಇದ್ದರೆ ಧ್ವನಿ ಮಾದರಿ ನೀಡಲು ಅವರು ಏಕೆ ಹಿಂಜರಿಯುತ್ತಿದ್ದಾರೆ ಎಂದು ಮಕೇನ್ ಪ್ರಶ್ನಿಸಿದ್ದಾರೆ.</p>.<p>ಕೇಂದ್ರ ಸಚಿವರಾಗಿ ಮುಂದುವರಿಯಲು ಖೇಖಾವತ್ಗೆ ನೈತಿಕತೆಯಿಲ್ಲ. ತನಿಖೆಯಲ್ಲಿ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರು ರಾಜೀನಾಮೆ ನೀಡಬೇಕು. ಹರಿಯಾಣ ಮತ್ತು ದೆಹಲಿ ಪೊಲೀಸರು ಬಂಡಾಯ ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>