ಈ ಸಂಬಂಧ ಟ್ವಿಟರ್ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿರುವ ರಾಹುಲ್, ‘#SpeakUpForDemocracy ಅಭಿಯಾನದಲ್ಲಿ ಒಂದಾಗಿ ಪಾಲ್ಗೊಳ್ಳಿ. ಪ್ರಜಾಪ್ರಭುತ್ವವನ್ನು ಉಳಿಸಲು ದನಿ ಎತ್ತೋಣ’ ಎಂದು ಬರೆದುಕೊಂಡಿದ್ದಾರೆ. ವಿಡಿಯೊ ಹಿನ್ನಲೆ ಧ್ವನಿಯಲ್ಲಿ, ಬಿಜೆಪಿಯು ಪ್ರಜಾಪ್ರಭುತ್ವವನ್ನು ಕೆಡವಿದೆ ಮತ್ತು ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವನ್ನು ಹತ್ಯೆ ಮಾಡಿದೆ ಎಂದು ಆರೋಪಿಸಲಾಗಿದೆ.