ನವದೆಹಲಿ: ‘ಸೆಪ್ಟೆಂಬರ್ ಅಂತ್ಯದಲ್ಲಿ ನಡೆಸಲು ಉದ್ದೇಶಿಸಿರುವ ಅಂತಿಮ ವರ್ಷದ ಪರೀಕ್ಷೆಗಳನ್ನು ರದ್ದುಪಡಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ದಾಖಲಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯನ್ನು ನಿಲ್ಲಿಸಬಾರದು. ನ್ಯಾಯಾಲಯವು ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿಲ್ಲ’ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ ವು (ಯುಜಿಸಿ) ಸುಪ್ರೀಂ ಕೋರ್ಟ್ ಮುಂದೆಶುಕ್ರವಾರ ಸ್ಪಷ್ಟಪಡಿಸಿದೆ.
‘ಅರ್ಜಿಯ ವಿಚಾರಣೆ ನಡೆಯುತ್ತಿರುವುದರಿಂದ ‘ತಡೆಯಾಜ್ಞೆ ಇದೆ’ ಎಂದು ಯಾರೂ ಭಾವಿಸಬಾರದು’ ಎಂದುಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.
ಮೆಹ್ತಾ ಅವರ ವಾದವನ್ನು ಒಪ್ಪಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರು, ‘ಹೌದು, ಈ ವಿಚಾರವಾಗಿ ನಾವು ಈವರೆಗೆ ಯಾವುದೇ (ತಡೆ) ಆದೇಶವನ್ನು ನೀಡಿಲ್ಲ’ ಎಂದರು.