<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯ ರದ್ದತಿಗೆ ಆಗಸ್ಟ್ 5ರಂದು ಒಂದು ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಮೊದಲ ವಾರ್ಷಿಕೋತ್ಸವದ ದಿನದಂದು ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ 'ನಿರ್ದಿಷ್ಟ ಮಾಹಿತಿ' ಲಭ್ಯವಾಗಿರುವ ಮೇರೆಗೆ ಶ್ರೀನಗರದ ಅಧಿಕಾರಿಗಳು ಸೋಮವಾರ ನಗರದಲ್ಲಿ ಕರ್ಫ್ಯೂ ವಿಧಿಸಿದ್ದಾರೆ.</p>.<p>ಶ್ರೀನಗರದ ಜಿಲ್ಲಾಧಿಕಾರಿ ಜಾಹಿದ್ ಇಕ್ಬಾಲ್ ಚೌಧರಿ, ಕರ್ಫ್ಯೂ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಆಗಸ್ಟ್ 4 ಮತ್ತು ಆಗಸ್ಟ್ 5 ರಂದು ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಪ್ರತ್ಯೇಕತಾವಾದಿ ಮತ್ತು ಪಾಕ್ ಪ್ರಾಯೋಜಿತ ಗುಂಪುಗಳು ಆಗಸ್ಟ್ 5 ಅನ್ನು ಕರಾಳ ದಿನವನ್ನಾಗಿ ಆಚರಿಸಿ, ಹಿಂಸಾತ್ಮಕ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ಫ್ಯೂ ಜಾರಿಗೆ ಆದೇಶಿಸಲಾಗಿದೆ ಎಂದು ಶ್ರೀನರಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಸಾರ್ವಜನಿಕ ಜೀವನ ಮತ್ತು ಆಸ್ತಿಗೆ ಅಪಾಯವನ್ನುಂಟುಮಾಡುವ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ನಿರ್ದಿಷ್ಟ ಮಾಹಿತಿಗಳಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಕೋವಿಡ್-19 ಕಂಟೈನ್ಮೆಂಟ್ ವಲಯಗಳಲ್ಲಿ ಯಾವುದೇ ಸಾಮೂಹಿಕ ಸಭೆ ಸೇರುವುದು ಅಪಾಯವನ್ನುಂಟು ಮಾಡಲಿದೆ. ಈಗಾಗಲೇ ಜಾರಿಯಲ್ಲಿರುವ ಕೋವಿಡ್-19 ಕಂಟೈನ್ಮೆಂಟ್ ವಲಯಗಳನ್ನು ಗುರಿಯಾಗಿಟ್ಟುಕೊಂಡು, ಜನರ ಓಡಾಟ ಮತ್ತು ಸಭೆ ಸೇರುವಿಕೆಯನ್ನು ನಿಷೇಧಿಸಲಾಗಿದೆ ಎಂದು ಎಸ್ಎಸ್ಪಿ ನೀಡಿರುವ ವರದಿಯಲ್ಲಿ ಹೇಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಇಂತಹ ಹಿಂಸಾಚಾರ ಮತ್ತು ಪ್ರಾಣ ಅಥವಾ ಆಸ್ತಿಪಾಸ್ತಿಗಳ ನಷ್ಟವನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಕರ್ಫ್ಯೂ ಹೇರುವುದು ಅಗತ್ಯವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯ ರದ್ದತಿಗೆ ಆಗಸ್ಟ್ 5ರಂದು ಒಂದು ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಮೊದಲ ವಾರ್ಷಿಕೋತ್ಸವದ ದಿನದಂದು ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ 'ನಿರ್ದಿಷ್ಟ ಮಾಹಿತಿ' ಲಭ್ಯವಾಗಿರುವ ಮೇರೆಗೆ ಶ್ರೀನಗರದ ಅಧಿಕಾರಿಗಳು ಸೋಮವಾರ ನಗರದಲ್ಲಿ ಕರ್ಫ್ಯೂ ವಿಧಿಸಿದ್ದಾರೆ.</p>.<p>ಶ್ರೀನಗರದ ಜಿಲ್ಲಾಧಿಕಾರಿ ಜಾಹಿದ್ ಇಕ್ಬಾಲ್ ಚೌಧರಿ, ಕರ್ಫ್ಯೂ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಆಗಸ್ಟ್ 4 ಮತ್ತು ಆಗಸ್ಟ್ 5 ರಂದು ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಪ್ರತ್ಯೇಕತಾವಾದಿ ಮತ್ತು ಪಾಕ್ ಪ್ರಾಯೋಜಿತ ಗುಂಪುಗಳು ಆಗಸ್ಟ್ 5 ಅನ್ನು ಕರಾಳ ದಿನವನ್ನಾಗಿ ಆಚರಿಸಿ, ಹಿಂಸಾತ್ಮಕ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ಫ್ಯೂ ಜಾರಿಗೆ ಆದೇಶಿಸಲಾಗಿದೆ ಎಂದು ಶ್ರೀನರಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಸಾರ್ವಜನಿಕ ಜೀವನ ಮತ್ತು ಆಸ್ತಿಗೆ ಅಪಾಯವನ್ನುಂಟುಮಾಡುವ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ನಿರ್ದಿಷ್ಟ ಮಾಹಿತಿಗಳಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಕೋವಿಡ್-19 ಕಂಟೈನ್ಮೆಂಟ್ ವಲಯಗಳಲ್ಲಿ ಯಾವುದೇ ಸಾಮೂಹಿಕ ಸಭೆ ಸೇರುವುದು ಅಪಾಯವನ್ನುಂಟು ಮಾಡಲಿದೆ. ಈಗಾಗಲೇ ಜಾರಿಯಲ್ಲಿರುವ ಕೋವಿಡ್-19 ಕಂಟೈನ್ಮೆಂಟ್ ವಲಯಗಳನ್ನು ಗುರಿಯಾಗಿಟ್ಟುಕೊಂಡು, ಜನರ ಓಡಾಟ ಮತ್ತು ಸಭೆ ಸೇರುವಿಕೆಯನ್ನು ನಿಷೇಧಿಸಲಾಗಿದೆ ಎಂದು ಎಸ್ಎಸ್ಪಿ ನೀಡಿರುವ ವರದಿಯಲ್ಲಿ ಹೇಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ಇಂತಹ ಹಿಂಸಾಚಾರ ಮತ್ತು ಪ್ರಾಣ ಅಥವಾ ಆಸ್ತಿಪಾಸ್ತಿಗಳ ನಷ್ಟವನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಕರ್ಫ್ಯೂ ಹೇರುವುದು ಅಗತ್ಯವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>