ಪ್ರತ್ಯೇಕತಾವಾದಿ ಮತ್ತು ಪಾಕ್ ಪ್ರಾಯೋಜಿತ ಗುಂಪುಗಳು ಆಗಸ್ಟ್ 5 ಅನ್ನು ಕರಾಳ ದಿನವನ್ನಾಗಿ ಆಚರಿಸಿ, ಹಿಂಸಾತ್ಮಕ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ಫ್ಯೂ ಜಾರಿಗೆ ಆದೇಶಿಸಲಾಗಿದೆ ಎಂದು ಶ್ರೀನರಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.