ಘಟನೆಗೆ ಪಂಜಾಬ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ ರಾಜ್ಯದ ಪಟಿಯಾಲ, ಬರ್ನಾಲಾ, ಪಠಾಣ್ಕೋಟ್ ಮತ್ತು ಮೊಗಾ ಸೇರಿದಂತೆ ಹಲವೆಡೆ ಪ್ರತಿಭಟನೆಯನ್ನು ನಡೆಸಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮುಖಾಂತರ ಆಗ್ರಹಿಸಿದ್ದಾರೆ.