<p><strong>ನವದೆಹಲಿ</strong>: ‘ಸಂಸತ್ತಿನ ಮುಂಗಾರು ಅಧಿವೇಶನ ಆರಂಭಿಸುವ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು‘ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಭಾನುವಾರ ತಿಳಿಸಿದ್ದಾರೆ.</p>.<p>‘ಮುಂಗಾರು ಅಧಿವೇಶನ ನಡೆಸಲು ಸೆಪ್ಟೆಂಬರ್ವರೆಗೂ ಕಾಲಾವಕಾಶವಿದೆ. ಈ ಹಿಂದೆ ಕೆಲವು ಬಾರಿ ಆಗಸ್ಟ್ ಅಂತ್ಯದಲ್ಲೂ ನಡೆಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಕೋವಿಡ್–19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಮುಂದಿನ ದಿನಗಳಲ್ಲಿ ಯಾವ ರೀತಿ ಇರುತ್ತದೆ ಎಂದು ಕಾದು ನೋಡಬೇಕಾಗಿದೆ. ಈ ಸನ್ನಿವೇಶದಲ್ಲಿ ಅಧಿವೇಶನವನ್ನು ಯಾವ ರೀತಿ ನಡೆಸಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>ಮಾರ್ಚ್ 23ರಂದು ಸಂಸತ್ತಿನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿತ್ತು. ಕೊರೊನಾ ವೈರಸ್ ಸಾಂಕ್ರಾಮಿಕ ಕಾಯಿಲೆ ಕಾರಣಕ್ಕೆ ಬಜೆಟ್ ಅಧಿವೇಶನವನ್ನು ನಿಗದಿಪಡಿಸಿದ ಅವಧಿಯ ಎರಡು ವಾರಗಳ ಮುನ್ನವೇ ಮುಂದೂಡಲಾಗಿತ್ತು.</p>.<p>ಲೋಕಸಭೆಯಲ್ಲಿ 15 ಮತ್ತು ರಾಜ್ಯಸಭೆಯಲ್ಲಿ 13 ಮಸೂದೆಗಳಿಗೆ ಅನುಮೋದನೆ ನೀಡಲಾಗಿತ್ತು. ಅಧಿವೇಶನವನ್ನು ಮುಂದೂಡುವ ಮುನ್ನ ಉಭಯ ಸದನಗಳು ಮಹತ್ವದ ಹಣಕಾಸು ಮಸೂದಗೆ ಅನುಮೋದನೆ ನೀಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಸಂಸತ್ತಿನ ಮುಂಗಾರು ಅಧಿವೇಶನ ಆರಂಭಿಸುವ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು‘ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಭಾನುವಾರ ತಿಳಿಸಿದ್ದಾರೆ.</p>.<p>‘ಮುಂಗಾರು ಅಧಿವೇಶನ ನಡೆಸಲು ಸೆಪ್ಟೆಂಬರ್ವರೆಗೂ ಕಾಲಾವಕಾಶವಿದೆ. ಈ ಹಿಂದೆ ಕೆಲವು ಬಾರಿ ಆಗಸ್ಟ್ ಅಂತ್ಯದಲ್ಲೂ ನಡೆಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಕೋವಿಡ್–19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಮುಂದಿನ ದಿನಗಳಲ್ಲಿ ಯಾವ ರೀತಿ ಇರುತ್ತದೆ ಎಂದು ಕಾದು ನೋಡಬೇಕಾಗಿದೆ. ಈ ಸನ್ನಿವೇಶದಲ್ಲಿ ಅಧಿವೇಶನವನ್ನು ಯಾವ ರೀತಿ ನಡೆಸಬೇಕು ಎನ್ನುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>ಮಾರ್ಚ್ 23ರಂದು ಸಂಸತ್ತಿನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿತ್ತು. ಕೊರೊನಾ ವೈರಸ್ ಸಾಂಕ್ರಾಮಿಕ ಕಾಯಿಲೆ ಕಾರಣಕ್ಕೆ ಬಜೆಟ್ ಅಧಿವೇಶನವನ್ನು ನಿಗದಿಪಡಿಸಿದ ಅವಧಿಯ ಎರಡು ವಾರಗಳ ಮುನ್ನವೇ ಮುಂದೂಡಲಾಗಿತ್ತು.</p>.<p>ಲೋಕಸಭೆಯಲ್ಲಿ 15 ಮತ್ತು ರಾಜ್ಯಸಭೆಯಲ್ಲಿ 13 ಮಸೂದೆಗಳಿಗೆ ಅನುಮೋದನೆ ನೀಡಲಾಗಿತ್ತು. ಅಧಿವೇಶನವನ್ನು ಮುಂದೂಡುವ ಮುನ್ನ ಉಭಯ ಸದನಗಳು ಮಹತ್ವದ ಹಣಕಾಸು ಮಸೂದಗೆ ಅನುಮೋದನೆ ನೀಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>