<p><strong>ಶ್ರೀನಗರ: </strong>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಅಮರನಾಥ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಸಹ ಸಚಿವರ ಜತೆಗೆ ದೇಗುಲಕ್ಕೆ ಭೇಟಿ ನೀಡಿದ್ದಾರೆ.</p>.<p>ಜಮ್ಮು–ಕಾಶ್ಮೀರದ ಪವಿತ್ರ ಗುಹೆಯಲ್ಲಿ ಅಮರನಾಥನಿಗೆ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.</p>.<p>ಸಚಿವರು ಸುಮಾರು ಒಂದು ಗಂಟೆ ಅಮರನಾಥ ದೇಗುಲದಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಸದ್ಯಜಮ್ಮು–ಕಾಶ್ಮೀರ ಪ್ರವಾಸದಲ್ಲಿರುವ ಸಚಿವರು ಶುಕ್ರವಾರ ಉನ್ನತ ಸೇನಾಧಿಕಾರಿಗಳ ಜತೆ ಮಾತುಕತೆ ನಡೆಸಿ ರಾಜ್ಯದಲ್ಲಿನ ಒಟ್ಟಾರೆ ಭದ್ರತಾ ಸನ್ನಿವೇಶದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಪಾಕಿಸ್ತಾನದ ದುಷ್ಕೃತ್ಯಗಳಿಗೆ ತಕ್ಕ ತಿರುಗೇಟು ನೀಡುವಂತೆ ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪಾಕಿಸ್ತಾನದ ಜತೆಗಿನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಒಸಿ) ಕಟ್ಟುನಿಟ್ಟಿನ ಕಣ್ಗಾವಲು ಮತ್ತು ಎಚ್ಚರಿಕೆ ವಹಿಸುವಂತೆಯೂ ಸಚಿವರು ಮಾತುಕತೆ ವೇಳೆ ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಅಮರನಾಥ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಸಹ ಸಚಿವರ ಜತೆಗೆ ದೇಗುಲಕ್ಕೆ ಭೇಟಿ ನೀಡಿದ್ದಾರೆ.</p>.<p>ಜಮ್ಮು–ಕಾಶ್ಮೀರದ ಪವಿತ್ರ ಗುಹೆಯಲ್ಲಿ ಅಮರನಾಥನಿಗೆ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.</p>.<p>ಸಚಿವರು ಸುಮಾರು ಒಂದು ಗಂಟೆ ಅಮರನಾಥ ದೇಗುಲದಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಸದ್ಯಜಮ್ಮು–ಕಾಶ್ಮೀರ ಪ್ರವಾಸದಲ್ಲಿರುವ ಸಚಿವರು ಶುಕ್ರವಾರ ಉನ್ನತ ಸೇನಾಧಿಕಾರಿಗಳ ಜತೆ ಮಾತುಕತೆ ನಡೆಸಿ ರಾಜ್ಯದಲ್ಲಿನ ಒಟ್ಟಾರೆ ಭದ್ರತಾ ಸನ್ನಿವೇಶದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಪಾಕಿಸ್ತಾನದ ದುಷ್ಕೃತ್ಯಗಳಿಗೆ ತಕ್ಕ ತಿರುಗೇಟು ನೀಡುವಂತೆ ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪಾಕಿಸ್ತಾನದ ಜತೆಗಿನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ (ಎಲ್ಒಸಿ) ಕಟ್ಟುನಿಟ್ಟಿನ ಕಣ್ಗಾವಲು ಮತ್ತು ಎಚ್ಚರಿಕೆ ವಹಿಸುವಂತೆಯೂ ಸಚಿವರು ಮಾತುಕತೆ ವೇಳೆ ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>