ಲಡಾಖ್–ಕಾಶ್ಮೀರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಡಾಖ್ ಮತ್ತು ಜಮ್ಮು–ಕಾಶ್ಮೀರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಲೇಹ್ಗೆ ತೆರಳಿದ್ದಾರೆ.
ಇಂದು ಲಡಾಖ್ಗೆ ಭೇಟಿ ನೀಡಲಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅವರು ರಾಜನಾಥ್ಗೆ ಸಾಥ್ ನೀಡಲಿದ್ದಾರೆ. ಜೊತೆಗೆ, ನಾಳೆ ಶ್ರೀನಗರಕ್ಕೆ ಭೇಟಿ ನೀಡಲಿರುವುದಾಗಿ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
‘ಗಡಿಯಲ್ಲಿನ ಪರಿಸ್ಥಿತಿ ಪರಿಶೀಲಿಸಲು ಲಡಾಖ್ ಮತ್ತು ಜಮ್ಮು–ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದೇನೆ. ಈ ಪ್ರದೇಶಗಳಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸುತ್ತೇನೆ’ ಎಂದು ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
Defence Minister Rajnath Singh, Chief of Defence Staff General Bipin Rawat and Army Chief General MM Naravane arrive at Leh Airport. Defence Minister is on a two-day visit to Ladakh and Jammu & Kashmir. pic.twitter.com/CXj2Pmoyu4
— ANI (@ANI) July 17, 2020
ಜುಲೈ 3ರಂದು ಪ್ರಧಾನಿ ನರೇಂದ್ರ ಮೋದಿ ಲಡಾಖ್ಗೆ ಭೇಟಿ ನೀಡಿ ಸೇನಾ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದ್ದರು.
ಜೂನ್ 15ರಂದು ಪೂರ್ವ ಲಡಾಖ್ನ ಗಾಲ್ವನ್ ಕಣಿವೆ ಪ್ರದೇಶದಲ್ಲಿ ಚೀನಾ ಪಡೆಗಳೊಂದಿಗೆ ನಡೆದಿದ್ದ ಸಂಘರ್ಷದಲ್ಲಿ ಕರ್ನಲ್ ಶ್ರೇಣಿಯ ಅಧಿಕಾರಿ ಸೇರಿ 20 ಮಂದಿ ಯೋಧರು ಹುತಾತ್ಮರಾಗಿದ್ದರು. ಆ ಬಳಿಕ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ವಾಯುಪಡೆ ಹೆಚ್ಚಿನ ಯುದ್ಧವಿಮಾನಗಳನ್ನು ಮುಂಚೂಣಿ ನೆಲೆಗಳಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
ಇದನ್ನೂ ಓದಿ... ಗಡಿ ಸಂಘರ್ಷ | ಪೂರ್ವ ಲಡಾಖ್ನಲ್ಲಿ ರಾತ್ರಿ ಗಸ್ತು ಹೆಚ್ಚಿಸಿದ ವಾಯುಪಡೆ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.