<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ಅಮರನಾಥನ ದರ್ಶನ ಪಡೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಾಸ್ತವ ಗಡಿ ನಿಯಂತ್ರಣ ರೇಖೆಗೆ ಹತ್ತಿರದ ಕೆರನ್ ಸೆಕ್ಟರ್ನ ಮುಂಚೂಣಿ ಸೇನಾ ನೆಲೆಗೂ ಭೇಟಿ ನೀಡಿದರು.</p>.<p>ಗಡಿಯಲ್ಲಿನ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲು ಹಿರಿಯ ಸೇನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<p>‘ಎಂತಹ ಪ್ರತಿಕೂಲ ಸನ್ನಿವೇಶ ಎದುರಾದರೂ ದೇಶ ರಕ್ಷಣೆಗೆ ಗಡಿಯಲ್ಲಿ ನಿಂತ ಶೂರ ಹಾಗೂ ಧೈರ್ಯಶಾಲಿ ಸೈನಿಕರ ಕುರಿತು ಹೆಮ್ಮೆ ಎನಿಸುತ್ತದೆ’ ಎಂದು ಸಚಿವರು ಕೊಂಡಾಡಿದರು. ‘ಪಾಕಿಸ್ತಾನದ ಗಡಿಯಲ್ಲಿ ಕಣ್ಗಾವಲನ್ನು ಹೆಚ್ಚಿಸಬೇಕು. ಆ ದೇಶವು ಯಾವುದೇ ದುಸ್ಸಾಹಸಕ್ಕೆ ಕೈಹಾಕಿದರೆ ತಕ್ಕ ಪ್ರತ್ಯುತ್ತರವನ್ನು ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಭೂಸೇನಾ ಪಡೆಯ ಮುಖ್ಯಸ್ಥ ಎಂ.ಎಂ. ನರವಣೆ ಅವರೂ ಸಚಿವರ ಜತೆಗಿದ್ದರು. ಹಿಮಾಲಯದ ಈ ಕೇಂದ್ರಾಡಳಿತ ಪ್ರದೇಶಗಳಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದ ಸಚಿವರು, ಶುಕ್ರವಾರ ಲೇಹ್ಗೆ ಭೇಟಿ ಕೊಟ್ಟಿದ್ದರು.</p>.<p><strong>ಅಮರನಾಥನ ದರ್ಶನ:</strong> ರಾಜನಾಥ್ ಸಿಂಗ್ ಅವರು ಅಮರನಾಥ ಗುಹಾಂತರ ದೇವಾಲಯಕ್ಕೂ ಭೇಟಿನೀಡಿ, ಪ್ರಾರ್ಥನೆ ಸಲ್ಲಿಸಿದರು. ಸುಮಾರು ಒಂದು ಗಂಟೆಯನ್ನು ಅಲ್ಲಿ ಕಳೆದರು.</p>.<p>ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿರುವ ‘ಖಚಿತ ಮಾಹಿತಿ’ ಸೇನೆಗೆ ಸಿಕ್ಕ ಸಂದರ್ಭದಲ್ಲಿಯೇ ರಕ್ಷಣಾ ಸಚಿವರು ಅಲ್ಲಿಗೆ ಭೇಟಿ ನೀಡಿರುವುದು ಕಾಕತಾಳೀಯವಾಗಿದೆ.</p>.<p>‘ಅಮರನಾಥ ದೇವರ ದರ್ಶನ ಮಾಡಿ, ಪ್ರಾರ್ಥಿಸಿದ ಬಳಿಕ, ಆತನ ಕೃಪೆಯನ್ನು ಪಡೆದ ವಿನೀತಭಾವ ಮೂಡಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಸೈನಿಕರ ಜತೆಗಿನ ಸಂವಾದದ ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ಅಮರನಾಥನ ದರ್ಶನ ಪಡೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಾಸ್ತವ ಗಡಿ ನಿಯಂತ್ರಣ ರೇಖೆಗೆ ಹತ್ತಿರದ ಕೆರನ್ ಸೆಕ್ಟರ್ನ ಮುಂಚೂಣಿ ಸೇನಾ ನೆಲೆಗೂ ಭೇಟಿ ನೀಡಿದರು.</p>.<p>ಗಡಿಯಲ್ಲಿನ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲು ಹಿರಿಯ ಸೇನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<p>‘ಎಂತಹ ಪ್ರತಿಕೂಲ ಸನ್ನಿವೇಶ ಎದುರಾದರೂ ದೇಶ ರಕ್ಷಣೆಗೆ ಗಡಿಯಲ್ಲಿ ನಿಂತ ಶೂರ ಹಾಗೂ ಧೈರ್ಯಶಾಲಿ ಸೈನಿಕರ ಕುರಿತು ಹೆಮ್ಮೆ ಎನಿಸುತ್ತದೆ’ ಎಂದು ಸಚಿವರು ಕೊಂಡಾಡಿದರು. ‘ಪಾಕಿಸ್ತಾನದ ಗಡಿಯಲ್ಲಿ ಕಣ್ಗಾವಲನ್ನು ಹೆಚ್ಚಿಸಬೇಕು. ಆ ದೇಶವು ಯಾವುದೇ ದುಸ್ಸಾಹಸಕ್ಕೆ ಕೈಹಾಕಿದರೆ ತಕ್ಕ ಪ್ರತ್ಯುತ್ತರವನ್ನು ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಭೂಸೇನಾ ಪಡೆಯ ಮುಖ್ಯಸ್ಥ ಎಂ.ಎಂ. ನರವಣೆ ಅವರೂ ಸಚಿವರ ಜತೆಗಿದ್ದರು. ಹಿಮಾಲಯದ ಈ ಕೇಂದ್ರಾಡಳಿತ ಪ್ರದೇಶಗಳಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದ ಸಚಿವರು, ಶುಕ್ರವಾರ ಲೇಹ್ಗೆ ಭೇಟಿ ಕೊಟ್ಟಿದ್ದರು.</p>.<p><strong>ಅಮರನಾಥನ ದರ್ಶನ:</strong> ರಾಜನಾಥ್ ಸಿಂಗ್ ಅವರು ಅಮರನಾಥ ಗುಹಾಂತರ ದೇವಾಲಯಕ್ಕೂ ಭೇಟಿನೀಡಿ, ಪ್ರಾರ್ಥನೆ ಸಲ್ಲಿಸಿದರು. ಸುಮಾರು ಒಂದು ಗಂಟೆಯನ್ನು ಅಲ್ಲಿ ಕಳೆದರು.</p>.<p>ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿರುವ ‘ಖಚಿತ ಮಾಹಿತಿ’ ಸೇನೆಗೆ ಸಿಕ್ಕ ಸಂದರ್ಭದಲ್ಲಿಯೇ ರಕ್ಷಣಾ ಸಚಿವರು ಅಲ್ಲಿಗೆ ಭೇಟಿ ನೀಡಿರುವುದು ಕಾಕತಾಳೀಯವಾಗಿದೆ.</p>.<p>‘ಅಮರನಾಥ ದೇವರ ದರ್ಶನ ಮಾಡಿ, ಪ್ರಾರ್ಥಿಸಿದ ಬಳಿಕ, ಆತನ ಕೃಪೆಯನ್ನು ಪಡೆದ ವಿನೀತಭಾವ ಮೂಡಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಸೈನಿಕರ ಜತೆಗಿನ ಸಂವಾದದ ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>