<p><strong>ನವದೆಹಲಿ:</strong>ಛತರ್ಪುರದ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿದೊಡ್ಡ ಆರೈಕೆ ಕೇಂದ್ರ ‘ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರ’ವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಭಾನುವಾರ ಉದ್ಘಾಟಿಸಿದರು.</p>.<p>ಈ ಆರೈಕೆ ಕೇಂದ್ರ ಒಟ್ಟು 10,000 ಹಾಸಿಗೆಗಳನ್ನು ಒಳಗೊಂಡಿದ್ದು, ಲಕ್ಷಣ ರಹಿತ ಕೊರೊನಾ ಸೋಂಕಿತರಿಗೆ ಇಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು. ಮನೆಯಲ್ಲಿ ಪ್ರತ್ಯೇಕ ವಾಸ ಮಾಡಲು ಸಾಧ್ಯವಾಗದಂತಹ ಲಕ್ಷಣ ರಹಿತ ಸೋಂಕಿತರಿಗೂ ಇಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.</p>.<p>ಈ ಆರೈಕೆ ಕೇಂದ್ರವು 1,700 ಅಡಿ ಉದ್ದ, 700 ಅಡಿ ಅಗಲ - ಸರಿಸುಮಾರು 20 ಫುಟ್ಬಾಲ್ ಮೈದಾನಗಳಷ್ಟು ವಿಸ್ತಾರವಾಗಿದೆ. ಅಲ್ಲದೇ ಒಟ್ಟು 200 ಅಂಕಣಗಳನ್ನು ಒಳಗೊಂಡಿದ್ದು, ಇದರಲ್ಲಿ ತಲಾ 50 ಹಾಸಿಗೆಗಳನ್ನು ಹಾಕಲಾಗಿದೆ.</p>.<p>ಇನ್ನು ದೆಹಲಿ ಸರ್ಕಾರವು ಆಡಳಿತಾತ್ಮಕ ಬೆಂಬಲವನ್ನು ನೀಡಿದರೆ, ಇಂಡೊ–ಟಿಬೆಟನ್ ಗಡಿ ಪೊಲೀಸ್ ಪಡೆ (ಐಟಿಬಿಪಿ) ಆರೈಕೆ ಕೇಂದ್ರದ ನೋಡಲ್ ಏಜೆನ್ಸಿಯಾಗಿ ಕಾರ್ಯ ನಿರ್ವಹಿಸಲಿದೆ. ಕೇಂದ್ರದ ಕಾರ್ಯಗಳಲ್ಲಿ ರಾಧಾ ಸ್ವಾಮಿ ಸತ್ಸಂಗ್ನ ಸ್ವಯಂಸೇವಕರು ಕೂಡ ಕೈ ಜೋಡಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಛತರ್ಪುರದ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿದೊಡ್ಡ ಆರೈಕೆ ಕೇಂದ್ರ ‘ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರ’ವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಭಾನುವಾರ ಉದ್ಘಾಟಿಸಿದರು.</p>.<p>ಈ ಆರೈಕೆ ಕೇಂದ್ರ ಒಟ್ಟು 10,000 ಹಾಸಿಗೆಗಳನ್ನು ಒಳಗೊಂಡಿದ್ದು, ಲಕ್ಷಣ ರಹಿತ ಕೊರೊನಾ ಸೋಂಕಿತರಿಗೆ ಇಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು. ಮನೆಯಲ್ಲಿ ಪ್ರತ್ಯೇಕ ವಾಸ ಮಾಡಲು ಸಾಧ್ಯವಾಗದಂತಹ ಲಕ್ಷಣ ರಹಿತ ಸೋಂಕಿತರಿಗೂ ಇಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ.</p>.<p>ಈ ಆರೈಕೆ ಕೇಂದ್ರವು 1,700 ಅಡಿ ಉದ್ದ, 700 ಅಡಿ ಅಗಲ - ಸರಿಸುಮಾರು 20 ಫುಟ್ಬಾಲ್ ಮೈದಾನಗಳಷ್ಟು ವಿಸ್ತಾರವಾಗಿದೆ. ಅಲ್ಲದೇ ಒಟ್ಟು 200 ಅಂಕಣಗಳನ್ನು ಒಳಗೊಂಡಿದ್ದು, ಇದರಲ್ಲಿ ತಲಾ 50 ಹಾಸಿಗೆಗಳನ್ನು ಹಾಕಲಾಗಿದೆ.</p>.<p>ಇನ್ನು ದೆಹಲಿ ಸರ್ಕಾರವು ಆಡಳಿತಾತ್ಮಕ ಬೆಂಬಲವನ್ನು ನೀಡಿದರೆ, ಇಂಡೊ–ಟಿಬೆಟನ್ ಗಡಿ ಪೊಲೀಸ್ ಪಡೆ (ಐಟಿಬಿಪಿ) ಆರೈಕೆ ಕೇಂದ್ರದ ನೋಡಲ್ ಏಜೆನ್ಸಿಯಾಗಿ ಕಾರ್ಯ ನಿರ್ವಹಿಸಲಿದೆ. ಕೇಂದ್ರದ ಕಾರ್ಯಗಳಲ್ಲಿ ರಾಧಾ ಸ್ವಾಮಿ ಸತ್ಸಂಗ್ನ ಸ್ವಯಂಸೇವಕರು ಕೂಡ ಕೈ ಜೋಡಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>