<p><strong>ಹೈದರಾಬಾದ್: </strong>ಹಲವು ಸರ್ಕಾರಗಳು ಹಾಗೂ ನಾಯಕರ ಏಳು ಬೀಳುಗಳನ್ನು ಕಂಡಿರುವ, ತೆಲಂಗಾಣ ಸಚಿವಾಲಯದ ಹಳೆದ ಕಟ್ಟಡವನ್ನು ಕೆಡಹುವ ಕಾರ್ಯಕ್ಕೆ ಮುಖ್ಯಮಂತ್ರಿ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರವು ಮಂಗಳವಾರ ಮುಂಜಾನೆ ಚಾಲನೆ ನೀಡಿದೆ.</p>.<p>ಕಟ್ಟಡವನ್ನು ಕೆಡಹುವ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಹಿಂದೆ ಹಲವರು ತೆಲಂಗಾಣ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು. ಇವೆಲ್ಲವನ್ನೂ ಇತ್ತೀಚೆಗೆ ಕೋರ್ಟ್ ರದ್ದುಪಡಿಸಿತ್ತು. ಇದಾಗುತ್ತಿದ್ದಂತೆ, ಕಟ್ಟಡವನ್ನು ಕೆಡಹುವ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ಇದೇ ಜಾಗದಲ್ಲಿ ಸುಮಾರು ₹ 400 ಕೋಟಿ ವೆಚ್ಚದಲ್ಲಿ ಒಂದು ಲಕ್ಷ ಚದರ ಅಡಿ ವಿಸ್ತಾರದ ಸುಸಜ್ಜಿತವಾದ ಹೊಸ ಕಟ್ಟಡವನ್ನು ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ.</p>.<p>ಉದ್ದೇಶಿತ ಹೊಸ ಕಟ್ಟಡದ ನಕ್ಷೆಯನ್ನು ಮುಖ್ಯಮಂತ್ರಿ ಕಚೇರಿಯು ಮಂಗಳವಾರ ಬಿಡುಗಡೆ ಮಾಡಿದೆ. ‘ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರು ಈ ನಕ್ಷೆಗೆ ಒಪ್ಪಿಗೆ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೊಸ ಕಟ್ಟಡವನ್ನು ಸಂಪೂರ್ಣವಾಗಿ ವಾಸ್ತು ಪ್ರಕಾರ ನಿರ್ಮಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ಹೇಳಿವೆ.</p>.<p>ಕಳೆದ ವರ್ಷ ಜೂನ್ 27ರಂದು ರಾವ್ ಅವರು ಹೊಸ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ್ದರು. ಕೆಲವರು ಹಳೆಯ ಕಟ್ಟಡ ಕೆಡಹುವುದನ್ನು ವಿರೋಧಿಸಿ ಕೋರ್ಟ್ ಮೊರೆ ಹೋಗಿದ್ದರು. ಇದರಿಂದ ಸರ್ಕಾರದ ಮೇಲೆ ಅನಗತ್ಯ ಆರ್ಥಿಕ ಹೊರೆ ಬೀಳುತ್ತದೆ ಎಂದು ಅವರು ವಾದಿಸಿದ್ದರು.</p>.<p>ಈಗಿರುವ ಕಟ್ಟಡವನ್ನು ಕೆಡವಿ, ಹೊಸ ಕಟ್ಟಡ ನಿರ್ಮಿಸುವುದಕ್ಕೆ ವಿರೋಧಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ‘ಟಿಆರ್ಎಸ್ನ ಈ ‘ದುಷ್ಕೃತ್ಯ’ವನ್ನು ನಾವು ಖಂಡಿಸುತ್ತೇವೆ. ಕೋವಿಡ್ ಪಿಡುಗು ಕಾಡುತ್ತಿರುವ ಸಂದರ್ಭದಲ್ಲೂ ಸ್ವಪ್ರತಿಷ್ಠೆಗಾಗಿ ಕೆಸಿಆರ್ ಅವರು ಈ ಕಾರ್ಯ ಆರಂಭಿಸಿದ್ದಾರೆ. ದೇಶದ ಇತರ ಮುಖ್ಯಮಂತ್ರಿಗಳು ಕೋವಿಡ್ ಪೀಡಿತರ ಚಿಕಿತ್ಸೆಗಾಗಿ ಸೌಲಭ್ಯಗಳನ್ನು ನಿರ್ಮಿಸುತ್ತಿದ್ದರೆ, ತೆಲಂಗಾಣದ ಮುಖ್ಯಮಂತ್ರಿ ಈಗಿರುವ ಸೌಲಭ್ಯವನ್ನು ನಾಶಪಡಿಸುತ್ತಿದ್ದಾರೆ. ಈ ಕಟ್ಟಡವನ್ನು ಸರಳವಾಗಿ ಸಾವಿರಾರು ಹಾಸಿಗೆಗಳ ಕೋವಿಡ್ ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸಬಹುದಾಗಿತ್ತು’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಕೆ. ಕೃಷ್ಣಸಾಗರ ರಾವ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ಹಲವು ಸರ್ಕಾರಗಳು ಹಾಗೂ ನಾಯಕರ ಏಳು ಬೀಳುಗಳನ್ನು ಕಂಡಿರುವ, ತೆಲಂಗಾಣ ಸಚಿವಾಲಯದ ಹಳೆದ ಕಟ್ಟಡವನ್ನು ಕೆಡಹುವ ಕಾರ್ಯಕ್ಕೆ ಮುಖ್ಯಮಂತ್ರಿ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರವು ಮಂಗಳವಾರ ಮುಂಜಾನೆ ಚಾಲನೆ ನೀಡಿದೆ.</p>.<p>ಕಟ್ಟಡವನ್ನು ಕೆಡಹುವ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಹಿಂದೆ ಹಲವರು ತೆಲಂಗಾಣ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು. ಇವೆಲ್ಲವನ್ನೂ ಇತ್ತೀಚೆಗೆ ಕೋರ್ಟ್ ರದ್ದುಪಡಿಸಿತ್ತು. ಇದಾಗುತ್ತಿದ್ದಂತೆ, ಕಟ್ಟಡವನ್ನು ಕೆಡಹುವ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ಇದೇ ಜಾಗದಲ್ಲಿ ಸುಮಾರು ₹ 400 ಕೋಟಿ ವೆಚ್ಚದಲ್ಲಿ ಒಂದು ಲಕ್ಷ ಚದರ ಅಡಿ ವಿಸ್ತಾರದ ಸುಸಜ್ಜಿತವಾದ ಹೊಸ ಕಟ್ಟಡವನ್ನು ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ.</p>.<p>ಉದ್ದೇಶಿತ ಹೊಸ ಕಟ್ಟಡದ ನಕ್ಷೆಯನ್ನು ಮುಖ್ಯಮಂತ್ರಿ ಕಚೇರಿಯು ಮಂಗಳವಾರ ಬಿಡುಗಡೆ ಮಾಡಿದೆ. ‘ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರು ಈ ನಕ್ಷೆಗೆ ಒಪ್ಪಿಗೆ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೊಸ ಕಟ್ಟಡವನ್ನು ಸಂಪೂರ್ಣವಾಗಿ ವಾಸ್ತು ಪ್ರಕಾರ ನಿರ್ಮಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ಹೇಳಿವೆ.</p>.<p>ಕಳೆದ ವರ್ಷ ಜೂನ್ 27ರಂದು ರಾವ್ ಅವರು ಹೊಸ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ್ದರು. ಕೆಲವರು ಹಳೆಯ ಕಟ್ಟಡ ಕೆಡಹುವುದನ್ನು ವಿರೋಧಿಸಿ ಕೋರ್ಟ್ ಮೊರೆ ಹೋಗಿದ್ದರು. ಇದರಿಂದ ಸರ್ಕಾರದ ಮೇಲೆ ಅನಗತ್ಯ ಆರ್ಥಿಕ ಹೊರೆ ಬೀಳುತ್ತದೆ ಎಂದು ಅವರು ವಾದಿಸಿದ್ದರು.</p>.<p>ಈಗಿರುವ ಕಟ್ಟಡವನ್ನು ಕೆಡವಿ, ಹೊಸ ಕಟ್ಟಡ ನಿರ್ಮಿಸುವುದಕ್ಕೆ ವಿರೋಧಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ‘ಟಿಆರ್ಎಸ್ನ ಈ ‘ದುಷ್ಕೃತ್ಯ’ವನ್ನು ನಾವು ಖಂಡಿಸುತ್ತೇವೆ. ಕೋವಿಡ್ ಪಿಡುಗು ಕಾಡುತ್ತಿರುವ ಸಂದರ್ಭದಲ್ಲೂ ಸ್ವಪ್ರತಿಷ್ಠೆಗಾಗಿ ಕೆಸಿಆರ್ ಅವರು ಈ ಕಾರ್ಯ ಆರಂಭಿಸಿದ್ದಾರೆ. ದೇಶದ ಇತರ ಮುಖ್ಯಮಂತ್ರಿಗಳು ಕೋವಿಡ್ ಪೀಡಿತರ ಚಿಕಿತ್ಸೆಗಾಗಿ ಸೌಲಭ್ಯಗಳನ್ನು ನಿರ್ಮಿಸುತ್ತಿದ್ದರೆ, ತೆಲಂಗಾಣದ ಮುಖ್ಯಮಂತ್ರಿ ಈಗಿರುವ ಸೌಲಭ್ಯವನ್ನು ನಾಶಪಡಿಸುತ್ತಿದ್ದಾರೆ. ಈ ಕಟ್ಟಡವನ್ನು ಸರಳವಾಗಿ ಸಾವಿರಾರು ಹಾಸಿಗೆಗಳ ಕೋವಿಡ್ ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸಬಹುದಾಗಿತ್ತು’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಕೆ. ಕೃಷ್ಣಸಾಗರ ರಾವ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>