ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ಈ ಬಗ್ಗೆ ಸಂಪಾದಕೀಯ ಪ್ರಕಟಿಸಲಾಗಿದ್ದು, ‘ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರವೂ ಜಮ್ಮು– ಕಾಶ್ಮೀರದ ಸ್ಥಿತಿ ಹಿಂದಿನಂತೆಯೇ ಇದೆ. ನಿತ್ಯ ರಸ್ತೆಗಳಲ್ಲಿ ರಕ್ತ ಹರಿಯುತ್ತಿದೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಭಯೋತ್ಪಾದಕ ಚಟುವಟಿಕೆ, ನಕಲಿ ನೋಟುಗಳ ಚಲಾವಣೆಯಲ್ಲಿ ಕಡಿತ ಆಗಿಲ್ಲ’ ಎಂದು ದೂರಿದೆ.