ನವದೆಹಲಿ: ಸಂವಿಧಾನದ ಪ್ರಕಾರ ಚುನಾವಣೆಯ ವೇಳಾಪಟ್ಟಿಯನ್ನು ನಿರ್ಧರಿಸುವ ಅಧಿಕಾರಚುನಾವಣಾ ಆಯೋಗಕ್ಕೆ ಮಾತ್ರವೇ ಇದೆ ಎಂದು ಆಯೋಗ ಮಂಗಳವಾರ ತಿಳಿಸಿದೆ.
ಜಮ್ಮು ಕಾಶ್ಮೀರದಲ್ಲಿನ ಚುನಾವಣೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಕುರಿತು ಅಲ್ಲಿನ ಲೆಪ್ಟಿನೆಂಟ್ ಗವರ್ನರ್ ಜಿ.ಸಿ. ಮುರ್ಮು ಅವರು ನೀಡಿದ ಹೇಳಿಕೆಗೆ ಪ್ರತಿಯಾಗಿ ಆಯೋಗ ಹೀಗೆ ಹೇಳಿದೆ.
ಸಂವಿಧಾನಿಕ ಚೌಕಟ್ಟನ್ನು ಮೀರಿ ಇಂತಹ ಹೇಳಿಕೆಯನ್ನು ಅಧಿಕಾರಿಗಳು ನೀಡುವುದು ಸೂಕ್ತವಲ್ಲ ಎಂದು ಆಯೋಗ ತಿಳಿಸಿದೆ.
ಆಯೋಗದ ಹಿರಿಯ ಅಧಿಕಾರಿಗಳು ಈ ಕುರಿತು ವಿವರವಾದ ಮೌಲ್ಯಮಾಪನ ನಡೆಸಿದ ನಂತರಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುತ್ತಾರೆ.
ಒಂದು ಪ್ರದೇಶದ ಹವಾಮಾನ,ಪ್ರಾದೇಶಿಕ ಮತ್ತು ಸ್ಥಳೀಯ ಉತ್ಸವಗಳಲ್ಲಿ ಎದುರಾಗುವ ಸನ್ನಿವೇಶ ಸೇರಿದಂತೆ ಹಲವು ಅಂಶಗಳನ್ನು ಗಮನಿಸಿ ಚುನಾವಣೆಯ ದಿನಾಂಕವನ್ನು ನಿಗದಿ ಪಡಿಸಲಾಗುತ್ತದೆ. ಸೇನೆ ಮತ್ತು ರೈಲ್ವೆ ಬೋಗಿಗಳ ಲಭ್ಯತೆಗಳನ್ನು ಪರಿಗಣಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.