ಈ ವಿಚಾರವಾಗಿ ಎಂಐಎಎಲ್ನ ನಿರ್ದೇಶಕ ಗುಣಮತಿ, ಅವರ ಪುತ್ರ ಹಾಗೂ ಆಡಳಿತ ನಿರ್ದೇಶಕ ಜಿ.ವಿ. ಸಂಜಯ್ ರೆಡ್ಡಿ, ವಿಮಾನನಿಲ್ದಾಣ ಪ್ರಾಧಿಕಾರದ ಕೆಲವು ಅಧಿಕಾರಿಗಳು ಹಾಗೂ ಇತರ ಒಂಬತ್ತು ಕಂಪನಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಮುಂಬೈ ವಿಮಾನ ನಿಲ್ದಾಣವನ್ನು ಉನ್ನತೀಕರಣಗೊಳಿಸುವುದು ಹಾಗೂ ನಿರ್ವಹಣೆಯ ಉದ್ದೇಶದಿಂದ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರವು 2006ರ ಏಪ್ರಿಲ್ 4ರಂದು ಎಂಐಎಎಲ್ ಜತೆ ಒಪ್ಪಂದ ಮಾಡಿಕೊಂಡಿತ್ತು.