<p><strong>ನವದೆಹಲಿ: </strong>ಹಣಅಕ್ರಮ ವರ್ಗಾವಣೆ ಪ್ರಕರಣಕ್ಕೆ(ಪಿಎಂಎಲ್ಎ) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ನಾಲ್ಕನೇ ಬಾರಿಗೆ ಗುರುವಾರ ವಿಚಾರಣೆ ನಡೆಸಿದೆ</p>.<p>ಸಂದೇಸರ ಸಹೋದರರ ಬ್ಯಾಂಕಿಗೆ ವಂಚನೆ ಮತ್ತು ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿದೆ.</p>.<p>ಅಹ್ಮದ್ ಪಟೇಲ್ ಅವರ ದೆಹಲಿಯ ಅಧಿಕೃತ ನಿವಾಸಕ್ಕೆ ಬೆಳಿಗ್ಗೆ 11 ಗಂಟೆ ಸುಮಾರಿಗೆಜಾರಿ ನಿರ್ದೇಶನಾಲಯದ ಮೂವರು ಅಧಿಕಾರಿಗಳು ಭೇಟಿ ನೀಡಿ, ವಿಚಾರಣೆ ನಡೆಸಿದರು.</p>.<p>‘ಪ್ರಕರಣ ಸಂಬಂಧ ಜು.2 ರಂದು ಪಟೇಲ್ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ಒಳಪಡಿಸಲಾಗಿತ್ತು. ಈ ವೇಳೆ ಒಟ್ಟು 128 ಪ್ರಶ್ನೆಗಳನ್ನು ಅಧಿಕಾರಿಗಳು ಕೇಳಿದ್ದರು.</p>.<p>‘ಇದು ರಾಜಕೀಯ ಪ್ರತೀಕಾರದ ಕ್ರಮ. ಜಾರಿ ನಿರ್ದೇಶನಾಲಯದವರು ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಕಿರುಕುಳ ನೀಡುತ್ತಿದ್ದಾರೆ. ಯಾರ ಒತ್ತಡದ ಮೇಲೆ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ’ ಎಂದು ಪಟೇಲ್ ಹೇಳಿದ್ದರು.</p>.<p>ಸಂದೇಸರ ಸಹೋದರ ಜತೆಗಿನ ಮತ್ತು ಸ್ಟರ್ಲಿಂಗ್ ಬಯೋಟೆಕ್ ಫಾರ್ಮಾಸ್ಯುಟಿಕಲ್ ಕಂಪೆನಿಯೊಂದಿಗಿನ ಸಂಬಂಧ ಮತ್ತು ಈ ಪ್ರಕರಣದಲ್ಲಿ ಅಹ್ಮದ್ ಕುಟುಂಬಸ್ಥರ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಅಹ್ಮದ್ ಪಟೇಲ್ ಅವರ ಮಗ ಫೈಜಲ್, ಅಳಿಯ ಇರ್ಫಾನ್ ಅಹ್ಮದ್ ಸಿದ್ಧಿಖಿ ಅವರನ್ನು ಕೂಡ ಕಳೆದ ವರ್ಷವಿಚಾರಣೆಗೆ ಒಳಪಡಿಸಿತ್ತು.</p>.<p>ಅಹ್ಮದ್ ಪಟೇಲ್ ಅವರು ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ‘ಕೋವಿಡ್ ಸಾಂಕ್ರಾಮಿಕ ಮಾರ್ಗಸೂಚಿ’ ಅನುಸಾರ ಮನೆಯಲ್ಲಿಯೇ ವಿಚಾರಣೆಗೆ ಅನುಮತಿ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹಣಅಕ್ರಮ ವರ್ಗಾವಣೆ ಪ್ರಕರಣಕ್ಕೆ(ಪಿಎಂಎಲ್ಎ) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ನಾಲ್ಕನೇ ಬಾರಿಗೆ ಗುರುವಾರ ವಿಚಾರಣೆ ನಡೆಸಿದೆ</p>.<p>ಸಂದೇಸರ ಸಹೋದರರ ಬ್ಯಾಂಕಿಗೆ ವಂಚನೆ ಮತ್ತು ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿದೆ.</p>.<p>ಅಹ್ಮದ್ ಪಟೇಲ್ ಅವರ ದೆಹಲಿಯ ಅಧಿಕೃತ ನಿವಾಸಕ್ಕೆ ಬೆಳಿಗ್ಗೆ 11 ಗಂಟೆ ಸುಮಾರಿಗೆಜಾರಿ ನಿರ್ದೇಶನಾಲಯದ ಮೂವರು ಅಧಿಕಾರಿಗಳು ಭೇಟಿ ನೀಡಿ, ವಿಚಾರಣೆ ನಡೆಸಿದರು.</p>.<p>‘ಪ್ರಕರಣ ಸಂಬಂಧ ಜು.2 ರಂದು ಪಟೇಲ್ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ಒಳಪಡಿಸಲಾಗಿತ್ತು. ಈ ವೇಳೆ ಒಟ್ಟು 128 ಪ್ರಶ್ನೆಗಳನ್ನು ಅಧಿಕಾರಿಗಳು ಕೇಳಿದ್ದರು.</p>.<p>‘ಇದು ರಾಜಕೀಯ ಪ್ರತೀಕಾರದ ಕ್ರಮ. ಜಾರಿ ನಿರ್ದೇಶನಾಲಯದವರು ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಕಿರುಕುಳ ನೀಡುತ್ತಿದ್ದಾರೆ. ಯಾರ ಒತ್ತಡದ ಮೇಲೆ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ’ ಎಂದು ಪಟೇಲ್ ಹೇಳಿದ್ದರು.</p>.<p>ಸಂದೇಸರ ಸಹೋದರ ಜತೆಗಿನ ಮತ್ತು ಸ್ಟರ್ಲಿಂಗ್ ಬಯೋಟೆಕ್ ಫಾರ್ಮಾಸ್ಯುಟಿಕಲ್ ಕಂಪೆನಿಯೊಂದಿಗಿನ ಸಂಬಂಧ ಮತ್ತು ಈ ಪ್ರಕರಣದಲ್ಲಿ ಅಹ್ಮದ್ ಕುಟುಂಬಸ್ಥರ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಅಹ್ಮದ್ ಪಟೇಲ್ ಅವರ ಮಗ ಫೈಜಲ್, ಅಳಿಯ ಇರ್ಫಾನ್ ಅಹ್ಮದ್ ಸಿದ್ಧಿಖಿ ಅವರನ್ನು ಕೂಡ ಕಳೆದ ವರ್ಷವಿಚಾರಣೆಗೆ ಒಳಪಡಿಸಿತ್ತು.</p>.<p>ಅಹ್ಮದ್ ಪಟೇಲ್ ಅವರು ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ‘ಕೋವಿಡ್ ಸಾಂಕ್ರಾಮಿಕ ಮಾರ್ಗಸೂಚಿ’ ಅನುಸಾರ ಮನೆಯಲ್ಲಿಯೇ ವಿಚಾರಣೆಗೆ ಅನುಮತಿ ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>