<p class="title"><strong>ನವದೆಹಲಿ: </strong>‘ಗುಜರಾತ್ ಸರ್ಕಾರದಲ್ಲಿದ್ದ ಯಾವ ವ್ಯಕ್ತಿ ಸಂದೇಸರ ಗ್ರೂಪ್ಗೆ ನೆರವಾದರು ಎಂಬ ನನ್ನ ಒಂದೇ ಒಂದು ಪ್ರಶ್ನೆಗೆ ಉತ್ತರಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ವಿಫಲರಾದರು’ ಎಂದು ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ತಿಳಿಸಿದ್ದಾರೆ.</p>.<p class="title">ಹಣದ ಅಕ್ರಮ ವರ್ಗಾವಣೆ ಆರೋಪ ಕುರಿತ ಸಂದೇಸರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈಚೆಗೆ ಅಹ್ಮದ್ ಪಟೇಲ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.</p>.<p class="title">‘ನನಗೆ 128 ಪ್ರಶ್ನೆಗಳನ್ನು ಕೇಳಲಾಯಿತು. ಎಲ್ಲದಕ್ಕೂ ಉತ್ತರಿಸಿದ್ದೇನೆ. ತನಿಖೆ ನಡೆಸಲು ನನ್ನ ಮನೆಗೇ ಮೂರು ಬಾರಿ ಬಂದಿದ್ದಕ್ಕಾಗಿ ಅಧಿಕಾರಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದೇನೆ’ ಎಂದು ಪಟೇಲ್ ಹೇಳಿದರು.</p>.<p class="title">ಆದರೆ, ‘ಅಧಿಕಾರಿಗಳಿಗೆ ನನ್ನ ಮೂಲಭೂತವಾದ ಒಂದೇ ಒಂದು ಪ್ರಶ್ನೆಗೆ ಉತ್ತರಿಸಲಾಗಲಿಲ್ಲ. ಸಂದೇಸರ ಗ್ರೂಪ್ಗೆ ಹಲವಾರು ರೀತಿಯಲ್ಲಿ ಅನುಕೂಲ ಆಗುವಂತೆ ನೆರವಾದ ಗುಜರಾತ್ ಸರ್ಕಾರದಲ್ಲಿರುವ ವ್ಯಕ್ತಿ ಯಾರು ಎಂಬುದೇ ನನ್ನ ಪ್ರಶ್ನೆಯಾಗಿತ್ತು’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>‘ಗುಜರಾತ್ ಸರ್ಕಾರದಲ್ಲಿದ್ದ ಯಾವ ವ್ಯಕ್ತಿ ಸಂದೇಸರ ಗ್ರೂಪ್ಗೆ ನೆರವಾದರು ಎಂಬ ನನ್ನ ಒಂದೇ ಒಂದು ಪ್ರಶ್ನೆಗೆ ಉತ್ತರಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ವಿಫಲರಾದರು’ ಎಂದು ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ತಿಳಿಸಿದ್ದಾರೆ.</p>.<p class="title">ಹಣದ ಅಕ್ರಮ ವರ್ಗಾವಣೆ ಆರೋಪ ಕುರಿತ ಸಂದೇಸರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈಚೆಗೆ ಅಹ್ಮದ್ ಪಟೇಲ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.</p>.<p class="title">‘ನನಗೆ 128 ಪ್ರಶ್ನೆಗಳನ್ನು ಕೇಳಲಾಯಿತು. ಎಲ್ಲದಕ್ಕೂ ಉತ್ತರಿಸಿದ್ದೇನೆ. ತನಿಖೆ ನಡೆಸಲು ನನ್ನ ಮನೆಗೇ ಮೂರು ಬಾರಿ ಬಂದಿದ್ದಕ್ಕಾಗಿ ಅಧಿಕಾರಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದೇನೆ’ ಎಂದು ಪಟೇಲ್ ಹೇಳಿದರು.</p>.<p class="title">ಆದರೆ, ‘ಅಧಿಕಾರಿಗಳಿಗೆ ನನ್ನ ಮೂಲಭೂತವಾದ ಒಂದೇ ಒಂದು ಪ್ರಶ್ನೆಗೆ ಉತ್ತರಿಸಲಾಗಲಿಲ್ಲ. ಸಂದೇಸರ ಗ್ರೂಪ್ಗೆ ಹಲವಾರು ರೀತಿಯಲ್ಲಿ ಅನುಕೂಲ ಆಗುವಂತೆ ನೆರವಾದ ಗುಜರಾತ್ ಸರ್ಕಾರದಲ್ಲಿರುವ ವ್ಯಕ್ತಿ ಯಾರು ಎಂಬುದೇ ನನ್ನ ಪ್ರಶ್ನೆಯಾಗಿತ್ತು’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>