ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಉಗ್ರನ ಬಲಿ

Last Updated 12 ಜುಲೈ 2020, 8:53 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ನಿಖರ ಮಾಹಿತಿ ಮೇರೆಗೆ ಶನಿವಾರ ಸಪೋರಾ‌ದ ರೆಬಾನ್‌ ಪ್ರಾಂತ್ಯದಲ್ಲಿ ಶೋಧ ಕಾರ್ಯಚರಣೆ ಆರಂಭಿಸಿದ ಭದ್ರತಾ ಪಡೆಯು ಭಾನುವಾರ ಮುಂಜಾನೆಯ ತನಕ ಉಗ್ರರಿಗಾಗಿ ಹುಡಕಾಟ ನಡೆಸಿದೆ. ಬೆಳಿಗ್ಗೆ 4ರ ಸುಮಾರಿಗೆ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ಭದ್ರತಾ ಪಡೆಯು ಪ್ರತಿದಾಳಿ ನಡೆಸಿದೆಎಂದು ಪೊಲೀಸ್‌ ಅಧಿಕಾರಿಯೊ‌ಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT