<p><strong>ಕಾನ್ಪುರ: </strong>‘ನನ್ನ ಪತಿ ತಪ್ಪಿತಸ್ಥರು, ಅವರು ಇಂಥ ಅಂತ್ಯಕ್ಕೆ ಅರ್ಹರಾಗಿದ್ದರು’ ಎಂದು ಎನ್ಕೌಂಟರ್ನಲ್ಲಿ ಹತನಾದ ವಿಕಾಸ್ ದುಬೆಯ ಪತ್ನಿ ರಿಚಾ ದುಬೆ ಶನಿವಾರ ಹೇಳಿದ್ದಾರೆ.</p>.<p>ದುಬೆಯ ಅಂತ್ಯಸಂಸ್ಕಾರ ಶುಕ್ರವಾರ ಇಲ್ಲಿನ ಭೈರೊಘಾಟ್ನಲ್ಲಿ ಬಿಗಿ ಭದ್ರತೆಯಲ್ಲಿ ನಡೆಯಿತು. ಅಲ್ಲಿಗೆ ಬಂದಿದ್ದ ರಿಚಾ ಅವರನ್ನು ಎದುರಾದ ಮಾಧ್ಯಮ ಪ್ರತಿನಿಧಿಗಳು, ‘ದುಬೆಯನ್ನು ಈ ರೀತಿ ಹತ್ಯೆ ಮಾಡಿದ್ದು ಸರಿಯೇ’ ಎಂದು ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ರಿಚಾ, ‘ಹೌದು ಹೌದು ಹೌದು, ನನ್ನ ಪತಿ ತಪ್ಪಿತಸ್ಥರು, ಅವರು ಈ ರೀತಿಯ ಅಂತ್ಯಕ್ಕೆ ಅರ್ಹರು’ ಎಂದು ಸಿಟ್ಟಿನಿಂದ ನುಡಿದರು.</p>.<p>ಎಂಟು ಮಂದಿ ಪೊಲಿಸರ ಹತ್ಯೆಯ ಆರೋಪಿ ದುಬೆಯನ್ನು ಶುಕ್ರವಾರ ಮುಂಜಾನೆ ಉತ್ತರಪ್ರದೇಶ ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದರು.</p>.<p>ಒಂದು ಹಂತದಲ್ಲಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರಿಚಾ, ಅಶ್ಲೀಲ ಪದಗಳಿಂದ ಅವರನ್ನು ನಿಂದಿಸಿ, ಸ್ಥಳದಿಂದ ತೆರಳುವಂತೆ ಸೂಚಿಸಿದರು ಎನ್ನಲಾಗಿದೆ. ತನ್ನ ಪತಿಯ ಹತ್ಯೆಗೆ ಮಾಧ್ಯಮದವರೂ ಕಾರಣ ಎಂದು ಆಕೆ ಆರೋಪಿಸಿದ್ದಾರೆ.</p>.<p>ಅಂತ್ಯಸಂಸ್ಕಾರದ ನಂತರ ರಿಚಾ ಹಾಗೂ ಅವರ ಪುತ್ರನನ್ನು ಪೊಲೀಸ್ ವಾಹನದಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಅವರನ್ನು ಬಿಡಲಾಗಿದೆಯೇ ಅಥವಾ ಬಂಧಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ.</p>.<p>ವಿಕಾಸ್ನ ತಂದೆ ರಾಮ್ಕುಮಾರ್ ದುಬೆ ಘಟನೆಯಿಂದ ಅಂತರ ಕಾಯ್ದುಕೊಂಡಿದ್ದು, ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ‘ಪೊಲೀಸರು ಮಾಡಿದ್ದೆಲ್ಲವೂ ಸರಿಯಾಗಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಪುರ: </strong>‘ನನ್ನ ಪತಿ ತಪ್ಪಿತಸ್ಥರು, ಅವರು ಇಂಥ ಅಂತ್ಯಕ್ಕೆ ಅರ್ಹರಾಗಿದ್ದರು’ ಎಂದು ಎನ್ಕೌಂಟರ್ನಲ್ಲಿ ಹತನಾದ ವಿಕಾಸ್ ದುಬೆಯ ಪತ್ನಿ ರಿಚಾ ದುಬೆ ಶನಿವಾರ ಹೇಳಿದ್ದಾರೆ.</p>.<p>ದುಬೆಯ ಅಂತ್ಯಸಂಸ್ಕಾರ ಶುಕ್ರವಾರ ಇಲ್ಲಿನ ಭೈರೊಘಾಟ್ನಲ್ಲಿ ಬಿಗಿ ಭದ್ರತೆಯಲ್ಲಿ ನಡೆಯಿತು. ಅಲ್ಲಿಗೆ ಬಂದಿದ್ದ ರಿಚಾ ಅವರನ್ನು ಎದುರಾದ ಮಾಧ್ಯಮ ಪ್ರತಿನಿಧಿಗಳು, ‘ದುಬೆಯನ್ನು ಈ ರೀತಿ ಹತ್ಯೆ ಮಾಡಿದ್ದು ಸರಿಯೇ’ ಎಂದು ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ರಿಚಾ, ‘ಹೌದು ಹೌದು ಹೌದು, ನನ್ನ ಪತಿ ತಪ್ಪಿತಸ್ಥರು, ಅವರು ಈ ರೀತಿಯ ಅಂತ್ಯಕ್ಕೆ ಅರ್ಹರು’ ಎಂದು ಸಿಟ್ಟಿನಿಂದ ನುಡಿದರು.</p>.<p>ಎಂಟು ಮಂದಿ ಪೊಲಿಸರ ಹತ್ಯೆಯ ಆರೋಪಿ ದುಬೆಯನ್ನು ಶುಕ್ರವಾರ ಮುಂಜಾನೆ ಉತ್ತರಪ್ರದೇಶ ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದರು.</p>.<p>ಒಂದು ಹಂತದಲ್ಲಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರಿಚಾ, ಅಶ್ಲೀಲ ಪದಗಳಿಂದ ಅವರನ್ನು ನಿಂದಿಸಿ, ಸ್ಥಳದಿಂದ ತೆರಳುವಂತೆ ಸೂಚಿಸಿದರು ಎನ್ನಲಾಗಿದೆ. ತನ್ನ ಪತಿಯ ಹತ್ಯೆಗೆ ಮಾಧ್ಯಮದವರೂ ಕಾರಣ ಎಂದು ಆಕೆ ಆರೋಪಿಸಿದ್ದಾರೆ.</p>.<p>ಅಂತ್ಯಸಂಸ್ಕಾರದ ನಂತರ ರಿಚಾ ಹಾಗೂ ಅವರ ಪುತ್ರನನ್ನು ಪೊಲೀಸ್ ವಾಹನದಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಅವರನ್ನು ಬಿಡಲಾಗಿದೆಯೇ ಅಥವಾ ಬಂಧಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ.</p>.<p>ವಿಕಾಸ್ನ ತಂದೆ ರಾಮ್ಕುಮಾರ್ ದುಬೆ ಘಟನೆಯಿಂದ ಅಂತರ ಕಾಯ್ದುಕೊಂಡಿದ್ದು, ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ‘ಪೊಲೀಸರು ಮಾಡಿದ್ದೆಲ್ಲವೂ ಸರಿಯಾಗಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>