ದುಬೆಯ ಅಂತ್ಯಸಂಸ್ಕಾರ ಶುಕ್ರವಾರ ಇಲ್ಲಿನ ಭೈರೊಘಾಟ್ನಲ್ಲಿ ಬಿಗಿ ಭದ್ರತೆಯಲ್ಲಿ ನಡೆಯಿತು. ಅಲ್ಲಿಗೆ ಬಂದಿದ್ದ ರಿಚಾ ಅವರನ್ನು ಎದುರಾದ ಮಾಧ್ಯಮ ಪ್ರತಿನಿಧಿಗಳು, ‘ದುಬೆಯನ್ನು ಈ ರೀತಿ ಹತ್ಯೆ ಮಾಡಿದ್ದು ಸರಿಯೇ’ ಎಂದು ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ರಿಚಾ, ‘ಹೌದು ಹೌದು ಹೌದು, ನನ್ನ ಪತಿ ತಪ್ಪಿತಸ್ಥರು, ಅವರು ಈ ರೀತಿಯ ಅಂತ್ಯಕ್ಕೆ ಅರ್ಹರು’ ಎಂದು ಸಿಟ್ಟಿನಿಂದ ನುಡಿದರು.