ಉಪಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲಟ್ ಅವರಿಂದ ಬಂಡಾಯ ಎದುರಿಸುತ್ತಿರುವ ಗೆಹ್ಲೋಟ್, ತಮ್ಮ ಪಟ್ಟುಗಳನ್ನು ಬಿಗಿಗೊಳಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷದ ಇಬ್ಬರು ಶಾಸಕರ ಬೆಂಬಲ ಪಡೆದಿರುವ ಅವರು, ಬಂಡಾಯ ಶಾಸಕರನ್ನು ಸೆಳೆಯಲು ತಂತ್ರ ಹೆಣೆದಿದ್ದಾರೆ. ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಗೆಹ್ಲೋಟ್ ಭಾರತೀಯ ಬುಡಕಟ್ಟು ಪಕ್ಷದ (ಬಿಟಿಪಿ) ಇಬ್ಬರು ಶಾಸಕರ ಬೆಂಬಲ ಪತ್ರವನ್ನು ಅವರಿಗೆ ಸಲ್ಲಿಸಿದರು.