<p><strong>ನವದೆಹಲಿ:</strong> ತನ್ನ ಕಚೇರಿ ಕಟ್ಟಡದ ಮಾಸ್ಟರ್ ಪ್ಲಾನ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ₹84.48 ಕೋಟಿ ದಂಡ ಪಾವತಿಸುವಂತೆ ಕೇಂದ್ರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯವು ಸುದ್ದಿಸಂಸ್ಥೆ ಪಿಟಿಐಗೆ ನೋಟಿಸ್ ಜಾರಿ ಮಾಡಿದೆ. ಭೂ ಮತ್ತು ಅಭಿವೃದ್ಧಿ ಕಚೇರಿಯ ಮುಖಾಂತರ ಜುಲೈ 7ರಂದು ಈ ನೋಟಿಸ್ ಜಾರಿಗೊಳಿಸಲಾಗಿದೆ.</p>.<p>‘ನೋಟಿಸ್ ಜಾರಿ ಮಾಡಿದ 30 ದಿನಗಳೊಳಗಾಗಿ ಅಗತ್ಯ ನಿಯಮಗಳನ್ನು ಪಾಲಿಸದಿದ್ದರೆ ಕಟ್ಟಡದ ಪ್ರವೇಶವನ್ನು ನಿರ್ಬಂಧಿಸಲಾಗುವುದು. ನಿಗದಿತ ಅವಧಿಯೊಳಗೆ ದಂಡ ಪಾವತಿಸಲು ವಿಫಲವಾದಲ್ಲಿ ಆ ಮೊತ್ತಕ್ಕೆ ಶೇ 10ರಷ್ಟು ಬಡ್ಡಿಯನ್ನು ನೀಡಬೇಕಾಗುತ್ತದೆ’ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.</p>.<p>ಸುದ್ದಿ ಸಂಸ್ಥೆ ಪಿಟಿಐ ಇತ್ತೀಚೆಗೆ ಚೀನಾದ ರಾಯಭಾರಿ ಸನ್ ವೀಸಾಂಗ್ ಅವರ ಸಂದರ್ಶನ ನಡೆಸಿತ್ತು. ಅಲ್ಲಿ ಅವರು ‘ಲಡಾಖ್ನಲ್ಲಿ ನಡೆದಿದ್ದ ಹಿಂಸಾತ್ಮಕ ಸಂಘರ್ಷಕ್ಕೆ ಭಾರತ ಸರ್ಕಾರವೇ ಹೊಣೆ’ ಎಂದು ಆರೋಪಿಸಿದ್ದರು. ಇದಾಗುತ್ತಿದ್ದಂತೆಯೇ, ಪಿಟಿಐ ಜತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಸರ್ಕಾರಿ ಸ್ವಾಮ್ಯದ ‘ಪ್ರಸಾರ ಭಾರತಿ’ ಸಂಸ್ಥೆಯು ಬೆದರಿಕೆ ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತನ್ನ ಕಚೇರಿ ಕಟ್ಟಡದ ಮಾಸ್ಟರ್ ಪ್ಲಾನ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ₹84.48 ಕೋಟಿ ದಂಡ ಪಾವತಿಸುವಂತೆ ಕೇಂದ್ರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯವು ಸುದ್ದಿಸಂಸ್ಥೆ ಪಿಟಿಐಗೆ ನೋಟಿಸ್ ಜಾರಿ ಮಾಡಿದೆ. ಭೂ ಮತ್ತು ಅಭಿವೃದ್ಧಿ ಕಚೇರಿಯ ಮುಖಾಂತರ ಜುಲೈ 7ರಂದು ಈ ನೋಟಿಸ್ ಜಾರಿಗೊಳಿಸಲಾಗಿದೆ.</p>.<p>‘ನೋಟಿಸ್ ಜಾರಿ ಮಾಡಿದ 30 ದಿನಗಳೊಳಗಾಗಿ ಅಗತ್ಯ ನಿಯಮಗಳನ್ನು ಪಾಲಿಸದಿದ್ದರೆ ಕಟ್ಟಡದ ಪ್ರವೇಶವನ್ನು ನಿರ್ಬಂಧಿಸಲಾಗುವುದು. ನಿಗದಿತ ಅವಧಿಯೊಳಗೆ ದಂಡ ಪಾವತಿಸಲು ವಿಫಲವಾದಲ್ಲಿ ಆ ಮೊತ್ತಕ್ಕೆ ಶೇ 10ರಷ್ಟು ಬಡ್ಡಿಯನ್ನು ನೀಡಬೇಕಾಗುತ್ತದೆ’ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.</p>.<p>ಸುದ್ದಿ ಸಂಸ್ಥೆ ಪಿಟಿಐ ಇತ್ತೀಚೆಗೆ ಚೀನಾದ ರಾಯಭಾರಿ ಸನ್ ವೀಸಾಂಗ್ ಅವರ ಸಂದರ್ಶನ ನಡೆಸಿತ್ತು. ಅಲ್ಲಿ ಅವರು ‘ಲಡಾಖ್ನಲ್ಲಿ ನಡೆದಿದ್ದ ಹಿಂಸಾತ್ಮಕ ಸಂಘರ್ಷಕ್ಕೆ ಭಾರತ ಸರ್ಕಾರವೇ ಹೊಣೆ’ ಎಂದು ಆರೋಪಿಸಿದ್ದರು. ಇದಾಗುತ್ತಿದ್ದಂತೆಯೇ, ಪಿಟಿಐ ಜತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಸರ್ಕಾರಿ ಸ್ವಾಮ್ಯದ ‘ಪ್ರಸಾರ ಭಾರತಿ’ ಸಂಸ್ಥೆಯು ಬೆದರಿಕೆ ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>