<p><strong>ಅಹಮದಾಬಾದ್:</strong> ಮುಂಬೈ– ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆ ವಿರುದ್ಧದ ರೈತ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಗುಜರಾತ್ನ ರೈತ ನಾಯಕ ಜಯೇಶ್ ಪಟೇಲ್ ಸೋಮವಾರ ಬಿಜೆಪಿಗೆ ಸೇರಿದರು.</p>.<p>‘ಸಂತ್ರಸ್ತ ರೈತರು ಎಂದಿಗೂ ಅಭಿವೃದ್ಧಿಗೆ ವಿರೋಧಿಗಳಾಗಿರಲಿಲ್ಲ. ಅಲ್ಲದೆ, ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸರ್ಕಾರದೊಂದಿಗಿನ ಮಾತುಕತೆಯೇ ಉತ್ತಮ ಮಾರ್ಗವಾಗಿದೆ ಎಂದು ನನಗೆ ಅರಿವಾಗಿದೆ,’ ಎಂದು ಜಯೇಶ್ ಪಟೇಲ್ ಹೇಳಿದ್ದಾರೆ.</p>.<p>ಗಾಂಧಿನಗರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜಯೇಶ್ ಪಟೇಲ್ ಅವರನ್ನು ರಾಜ್ಯ ಘಟಕದ ಮುಖ್ಯಸ್ಥ ಸಿ ಆರ್ ಪಾಟೀಲ್ ಮತ್ತು ಸಚಿವ ಗಣಪತ್ ವಾಸವ ಪಕ್ಷಕ್ಕೆ ಬರಮಾಡಿಕೊಂಡರು.</p>.<p>ಸೂರತ್ ಮೂಲದ ಪಟೇಲ್ ದಕ್ಷಿಣ ಗುಜರಾತ್ನ ಸಹಕಾರಿ ಕ್ಷೇತ್ರದಲ್ಲಿ ಹೆಸರಾಂತ ವ್ಯಕ್ತಿ. ಅಲ್ಲದೆ, ದಕ್ಷಿಣ ಗುಜರಾತ್ನ ರೈತ ನಾಯಕರೂ ಹೌದು.</p>.<p>ಮುಂಬೈ–ಅಹಮದಾಬಾದ್ ಸಂಪರ್ಕಿಸುವ ಗುರಿ ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗುವ ಭೂಮಿಗೆ ಉತ್ತಮ ಪರಿಹಾರ ನೀಡುವಂತೆ ಒತ್ತಾಯಿಸಿ ಸೂರತ್, ನವಸಾರಿ ಮತ್ತು ವಲ್ಸಾದ್ ಜಿಲ್ಲೆಗಳಲ್ಲಿ ರೈತರು ಪಟೇಲ್ ಅವರ ನೇತೃತ್ವದಲ್ಲಿ ಹಲವು ಪ್ರತಿಭಟನೆಗಳನ್ನು ನಡೆಸಿದ್ದಾರೆ.</p>.<p>ದಕ್ಷಿಣ ಗುಜರಾತ್ನ ರೈತರೇ ನನ್ನನ್ನು ಬಿಜೆಪಿ ಸೇರುವಂತೆ ಹೇಳಿದ್ದಾರೆ. ಬಿಜೆಪಿ ಸೇರಿದರೆ ನನ್ನಿಂದ ಹೆಚ್ಚಿನ ಸೇವೇ ಸಿಗಲಿದೆ ಎಂದು ರೈತರು ಹೇಳಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ.</p>.<p>ಮುಂಬೈ–ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಯು ಒಟ್ಟು 508.17 ಕಿ.ಮೀ ಉದ್ದದ ಮಾರ್ಗವಾಗಿದೆ. ಈ ಯೋಜನೆಯು ಮಹಾರಾಷ್ಟ್ರದಲ್ಲಿ 155.76 ಕಿ.ಮೀ, ಗುಜರಾತ್ನಲ್ಲಿ 348.04 ಕಿ.ಮೀ, ದಾದ್ರಾ ಮತ್ತು ನಗರ ಹವೇಲಿಯಲ್ಲಿ 4.3 ಕಿ.ಮೀ ಮಾರ್ಗ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಮುಂಬೈ– ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆ ವಿರುದ್ಧದ ರೈತ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಗುಜರಾತ್ನ ರೈತ ನಾಯಕ ಜಯೇಶ್ ಪಟೇಲ್ ಸೋಮವಾರ ಬಿಜೆಪಿಗೆ ಸೇರಿದರು.</p>.<p>‘ಸಂತ್ರಸ್ತ ರೈತರು ಎಂದಿಗೂ ಅಭಿವೃದ್ಧಿಗೆ ವಿರೋಧಿಗಳಾಗಿರಲಿಲ್ಲ. ಅಲ್ಲದೆ, ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸರ್ಕಾರದೊಂದಿಗಿನ ಮಾತುಕತೆಯೇ ಉತ್ತಮ ಮಾರ್ಗವಾಗಿದೆ ಎಂದು ನನಗೆ ಅರಿವಾಗಿದೆ,’ ಎಂದು ಜಯೇಶ್ ಪಟೇಲ್ ಹೇಳಿದ್ದಾರೆ.</p>.<p>ಗಾಂಧಿನಗರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜಯೇಶ್ ಪಟೇಲ್ ಅವರನ್ನು ರಾಜ್ಯ ಘಟಕದ ಮುಖ್ಯಸ್ಥ ಸಿ ಆರ್ ಪಾಟೀಲ್ ಮತ್ತು ಸಚಿವ ಗಣಪತ್ ವಾಸವ ಪಕ್ಷಕ್ಕೆ ಬರಮಾಡಿಕೊಂಡರು.</p>.<p>ಸೂರತ್ ಮೂಲದ ಪಟೇಲ್ ದಕ್ಷಿಣ ಗುಜರಾತ್ನ ಸಹಕಾರಿ ಕ್ಷೇತ್ರದಲ್ಲಿ ಹೆಸರಾಂತ ವ್ಯಕ್ತಿ. ಅಲ್ಲದೆ, ದಕ್ಷಿಣ ಗುಜರಾತ್ನ ರೈತ ನಾಯಕರೂ ಹೌದು.</p>.<p>ಮುಂಬೈ–ಅಹಮದಾಬಾದ್ ಸಂಪರ್ಕಿಸುವ ಗುರಿ ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗುವ ಭೂಮಿಗೆ ಉತ್ತಮ ಪರಿಹಾರ ನೀಡುವಂತೆ ಒತ್ತಾಯಿಸಿ ಸೂರತ್, ನವಸಾರಿ ಮತ್ತು ವಲ್ಸಾದ್ ಜಿಲ್ಲೆಗಳಲ್ಲಿ ರೈತರು ಪಟೇಲ್ ಅವರ ನೇತೃತ್ವದಲ್ಲಿ ಹಲವು ಪ್ರತಿಭಟನೆಗಳನ್ನು ನಡೆಸಿದ್ದಾರೆ.</p>.<p>ದಕ್ಷಿಣ ಗುಜರಾತ್ನ ರೈತರೇ ನನ್ನನ್ನು ಬಿಜೆಪಿ ಸೇರುವಂತೆ ಹೇಳಿದ್ದಾರೆ. ಬಿಜೆಪಿ ಸೇರಿದರೆ ನನ್ನಿಂದ ಹೆಚ್ಚಿನ ಸೇವೇ ಸಿಗಲಿದೆ ಎಂದು ರೈತರು ಹೇಳಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ.</p>.<p>ಮುಂಬೈ–ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಯು ಒಟ್ಟು 508.17 ಕಿ.ಮೀ ಉದ್ದದ ಮಾರ್ಗವಾಗಿದೆ. ಈ ಯೋಜನೆಯು ಮಹಾರಾಷ್ಟ್ರದಲ್ಲಿ 155.76 ಕಿ.ಮೀ, ಗುಜರಾತ್ನಲ್ಲಿ 348.04 ಕಿ.ಮೀ, ದಾದ್ರಾ ಮತ್ತು ನಗರ ಹವೇಲಿಯಲ್ಲಿ 4.3 ಕಿ.ಮೀ ಮಾರ್ಗ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>