ನವದೆಹಲಿ: ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜಯಂತಿಯ ದಿನವಾದ ಇಂದು ( ಜು. 6) ಪ್ರಧಾನಿ ನರೇಂದ್ರ ಮೋದಿ ಅವರು ಮುಖರ್ಜಿಯವರನ್ನು ಸ್ಮರಿಸಿದ್ದಾರೆ.
ದೇಶಭಕ್ತರಾಗಿದ್ದ ಶ್ಯಾಮ ಪ್ರಸಾದ್ ಮುಖರ್ಜಿ ಅವರು ಭಾರತದ ಅಭಿವೃದ್ಧಿಗೆ ಆದರ್ಶ ಪ್ರಾಯವಾದ ಕೊಡುಗೆಗಳನ್ನು ನೀಡಿದ್ದಾರೆ. ದೇಶದ ಏಕತೆಗಾಗಿ ದಿಟ್ಟತನದಿಂದ ಶ್ರಮಿಸಿದ್ದಾರೆ. ಅವರ ಚಿಂತನೆಗಳು, ಆದರ್ಶಗಳು ದೇಶದ ಲಕ್ಷಾಂತರ ಜನತೆಗೆ ಶಕ್ತಿ ತುಂಬಿವೆ ಎಂದು ನರೇಂದ್ರ ಮೋದಿ ಸೋಮವಾರ ಟ್ವೀಟ್ ಮಾಡಿದ್ದಾರೆ.
I bow to Dr. Syama Prasad Mookerjee on his Jayanti. A devout patriot, he made exemplary contributions towards India’s development. He made courageous efforts to further India’s unity. His thoughts and ideals give strength to millions across the nation.
ಭಾರತದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಸೇವೆಯನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸ್ಮರಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ಮುಖರ್ಜಿ ಅವರ ಕೊಡುಗೆಗಳನ್ನು ಸ್ಮರಿಸಿದ್ದಾರೆ.
ಭಾರತಮಾತೆಯ ಧೀರ ಪುತ್ರ, ಮಹಾನ್ ದೇಶಪ್ರೇಮಿ, ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿಯವರ ಜಯಂತಿಯಂದು ಅವರನ್ನು ಸ್ಮರಿಸೋಣ. ಅಖಂಡ ಭಾರತದ ಏಕತೆಗಾಗಿ ಹೋರಾಡಿದ ಧೀಮಂತ ನಾಯಕ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಸಾಧನೆ ಮತ್ತು ದೇಶಸೇವೆಗಳನ್ನು ದೇಶ ಎಂದಿಗೂ ಮರೆಯುವುದಿಲ್ಲ. pic.twitter.com/T7JBHGtMu1
ಶ್ಯಾಮ ಪ್ರಸಾದ್ ಮುಖರ್ಜಿ ಅವರು ಜುಲೈ 6, 1901 ರಂದು ಕೋಲ್ಕತ್ತಾದಲ್ಲಿ ಜನಿಸಿದರು. ಬ್ರಿಟಿಷ್ ಆಡಳಿತದಲ್ಲಿ ಬ್ಯಾರಿಸ್ಟರ್ ಆಗಿದ್ದರು. ರಾಜಕಾರಣಿ ಮತ್ತು ಶಿಕ್ಷಣ ತಜ್ಞರಾಗಿದ್ದ ಅವರು ಜವಾಹರಲಾಲ್ ನೆಹರೂ ಸಂಪುಟದಲ್ಲಿ ಕೈಗಾರಿಕೆ ಸಚಿವರಾಗಿದ್ದರು.