<p><strong>ಮೀರತ್</strong>: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ರೌಡಿಶೀಟರ್ ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ರೌಡಿಶೀಟರ್ ಮೃತಪಟ್ಟಿದ್ದು, ಸಬ್ ಇನ್ಸ್ಪೆಕ್ಟರ್ ಒಬ್ಬರು ಗಾಯಗೊಂಡಿದ್ದಾರೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ದೀಪಕ್ ಸಿದ್ದು ಮೃತಪಟ್ಟವನು. ಈತನ ಬಗ್ಗೆ ಸುಳಿವು ಕೊಟ್ಟವರಿಗೆ ₹ 50 ಸಾವಿರ ಬಹುಮಾನವನ್ನೂ ಘೋಷಿಸಲಾಗಿತ್ತು’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಸಾಹ್ನಿ ತಿಳಿಸಿದ್ದಾರೆ.</p>.<p>ದೀಪಕ್ ಸಿದ್ದು ವಿರುದ್ಧ ಕೊಲೆ, ಲೂಟಿ ಮತ್ತು ದೌರ್ಜನ್ಯ ಸೇರಿದಂತೆ ಒಂದೂವರೆ ಡಜನ್ಗಿಂತಲೂ ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದವು.</p>.<p>‘ಸಹಚರರೊಂದಿಗೆ ತಾನಿದ್ದಸ್ಥಳಕ್ಕೆ ಬಂದ ಪೊಲೀಸರಮೇಲೆ ಸಿದ್ದು ಗುಂಡಿನ ದಾಳಿ ನಡೆಸಿದ. ಆಗ ಸಬ್ ಇನ್ಸ್ಪೆಕ್ಟರ್ ಒಬ್ಬರು ಗಾಯಗೊಂಡರು. ಪೊಲೀಸರೂ ಪ್ರತಿ ದಾಳಿ ನಡೆಸಿದರು. ಗಾಯಗೊಂಡ ದೀಪಕ್ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆತ ಮೃತಪಟ್ಟ' ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೀರತ್</strong>: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ರೌಡಿಶೀಟರ್ ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ರೌಡಿಶೀಟರ್ ಮೃತಪಟ್ಟಿದ್ದು, ಸಬ್ ಇನ್ಸ್ಪೆಕ್ಟರ್ ಒಬ್ಬರು ಗಾಯಗೊಂಡಿದ್ದಾರೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ದೀಪಕ್ ಸಿದ್ದು ಮೃತಪಟ್ಟವನು. ಈತನ ಬಗ್ಗೆ ಸುಳಿವು ಕೊಟ್ಟವರಿಗೆ ₹ 50 ಸಾವಿರ ಬಹುಮಾನವನ್ನೂ ಘೋಷಿಸಲಾಗಿತ್ತು’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಸಾಹ್ನಿ ತಿಳಿಸಿದ್ದಾರೆ.</p>.<p>ದೀಪಕ್ ಸಿದ್ದು ವಿರುದ್ಧ ಕೊಲೆ, ಲೂಟಿ ಮತ್ತು ದೌರ್ಜನ್ಯ ಸೇರಿದಂತೆ ಒಂದೂವರೆ ಡಜನ್ಗಿಂತಲೂ ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದವು.</p>.<p>‘ಸಹಚರರೊಂದಿಗೆ ತಾನಿದ್ದಸ್ಥಳಕ್ಕೆ ಬಂದ ಪೊಲೀಸರಮೇಲೆ ಸಿದ್ದು ಗುಂಡಿನ ದಾಳಿ ನಡೆಸಿದ. ಆಗ ಸಬ್ ಇನ್ಸ್ಪೆಕ್ಟರ್ ಒಬ್ಬರು ಗಾಯಗೊಂಡರು. ಪೊಲೀಸರೂ ಪ್ರತಿ ದಾಳಿ ನಡೆಸಿದರು. ಗಾಯಗೊಂಡ ದೀಪಕ್ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆತ ಮೃತಪಟ್ಟ' ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>