<p><strong>ನವದೆಹಲಿ:</strong>ದೇಶದಲ್ಲಿ ಇಲ್ಲಿಯವರೆಗೆ 99 ವೈದ್ಯರು ಕೋವಿಡ್-19 ರೋಗದಿಂದ ಮೃತಪಟ್ಟಿದ್ದಾರೆ ಎಂದು ಇಂಡಿಯಲ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಹೇಳಿದ್ದು, ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಮುಂಜಾಗ್ರತೆ ವಹಿಸಲು ಸೂಚಿಸಿದೆ.</p>.<p>ಐಎಂಎ ರಾಷ್ಟ್ರೀಯ ಕೋವಿಡ್ ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ 1,302 ವೈದ್ಯರಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಇದರಲ್ಲಿ 99 ಮಂದಿ ಮೃತಪಟ್ಟಿದ್ದಾರೆ.ಸಾವಿಗೀಡಾದವರಲ್ಲಿ 73 ಮಂದಿ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. 35-50 ವಯಸ್ಸಿನ ನಡುವೆ ಇರುವ 19 ಮಂದಿ ಮತ್ತು 35 ವಯಸ್ಸಿಗಿಂತ ಕಡಿಮೆ ವಯಸ್ಸಿನ 7 ಮಂದಿ ಮೃತಪಟ್ಟಿದ್ದಾರೆ.</p>.<p>ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಎಂದು ಐಎಂಎ ವೈದ್ಯರಿಗೆ ಮತ್ತು ವೈದ್ಯಕೀಯ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದೆ.ಅದೇ ವೇಳೆ ವೈದ್ಯರು ವೈಜ್ಞಾನಿಕ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದು ಐಎಂಎ ಹೇಳಿದೆ.</p>.<p>ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಬೇಕಾದರೆ ಸಾಕಷ್ಟು ತಯಾರಿ ನಡೆಸಬೇಕು. ಸೋಂಕು ಹರಡದಂತೆ ನಿಯಂತ್ರಿಸಲು ಮುಂಜಾಗ್ರತೆ ವಹಿಸಬೇಕು. ವೈದ್ಯರಿಗೆ, ನರ್ಸ್ ಮತ್ತು ಇತರ ಸಿಬ್ಬಂದಿಗಳು ಸಾಕಷ್ಟು ಜಾಗರೂಕರಾಗಿರಬೇಕು ಎಂದು ಐಎಂಎ ತಮ್ಮ ಪ್ರಕಟಣೆಯಲ್ಲಿ ಹೇಳಿದೆ.</p>.<p>ವೈದ್ಯರು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ವ್ಯವಸ್ಥೆಗಳ ಬಗ್ಗೆ ಗಮನ ಹರಿಸಬೇಕು. ಸ್ವಚ್ಛತೆ ಮತ್ತು ಸ್ಯಾನಿಟೈಜ್ ಮಾಡುವುದನ್ನು ತಪ್ಪದೇ ಪಾಲಿಸಬೇಕು.</p>.<p>ಹಿರಿಯ ಮತ್ತು ಕಿರಿಯ ವೈದ್ಯರಿಗೆ ಕೊರೊನಾ ಸೋಂಕು ತಗಲುತ್ತಿದೆ. ಆದರೆ ಸಾವಿಗೀಡಾದವರಲ್ಲಿ ಹಿರಿಯರೇ ಹೆಚ್ಚು.ಹಾಗಾಗಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಮತ್ತು ಆಸ್ಪತ್ರೆಯ ಒಳಗೆ ಸಾಕಷ್ಟು ಜಾಗರೂಕರಾಗಿರಬೇಕು ಎಂದು ಐಎಂಎ ಹೇಳಿದೆ.</p>.<p>ಈ ಜಾಗತಿಕ ಪಿಡುಗಿನಿಂದ ಕಾಪಾಡಲು ವೈದ್ಯರೇ ಆಶಾಕಿರಣವಾಗಿದ್ದಾರೆ.ಕೋವಿಡ್-19 ನಿಂದ ವೈದ್ಯರು ಸಾವಿಗೀಡಾಗುತ್ತಿರುವುದು ಆತಂಕದ ಸಂಗತಿ. ರೋಗ ಬಾರದಂತೆ ಸ್ವಯ ರಕ್ಷಣೆ ಮಾಡಿಕೊಳ್ಳುವ ಜತೆಗೆ ಕುಟುಂಬ ಮತ್ತು ಸಹೋದ್ಯೋಗಿಗಳಿಗೂ ಸುರಕ್ಷಿತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಐಎಂಎ ಅಧ್ಯಕ್ಷ ಡಾ. ರಾಜನ್ ಶರ್ಮಾ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ದೇಶದಲ್ಲಿ ಇಲ್ಲಿಯವರೆಗೆ 99 ವೈದ್ಯರು ಕೋವಿಡ್-19 ರೋಗದಿಂದ ಮೃತಪಟ್ಟಿದ್ದಾರೆ ಎಂದು ಇಂಡಿಯಲ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಹೇಳಿದ್ದು, ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಮುಂಜಾಗ್ರತೆ ವಹಿಸಲು ಸೂಚಿಸಿದೆ.</p>.<p>ಐಎಂಎ ರಾಷ್ಟ್ರೀಯ ಕೋವಿಡ್ ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ 1,302 ವೈದ್ಯರಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಇದರಲ್ಲಿ 99 ಮಂದಿ ಮೃತಪಟ್ಟಿದ್ದಾರೆ.ಸಾವಿಗೀಡಾದವರಲ್ಲಿ 73 ಮಂದಿ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. 35-50 ವಯಸ್ಸಿನ ನಡುವೆ ಇರುವ 19 ಮಂದಿ ಮತ್ತು 35 ವಯಸ್ಸಿಗಿಂತ ಕಡಿಮೆ ವಯಸ್ಸಿನ 7 ಮಂದಿ ಮೃತಪಟ್ಟಿದ್ದಾರೆ.</p>.<p>ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಎಂದು ಐಎಂಎ ವೈದ್ಯರಿಗೆ ಮತ್ತು ವೈದ್ಯಕೀಯ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದೆ.ಅದೇ ವೇಳೆ ವೈದ್ಯರು ವೈಜ್ಞಾನಿಕ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದು ಐಎಂಎ ಹೇಳಿದೆ.</p>.<p>ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಬೇಕಾದರೆ ಸಾಕಷ್ಟು ತಯಾರಿ ನಡೆಸಬೇಕು. ಸೋಂಕು ಹರಡದಂತೆ ನಿಯಂತ್ರಿಸಲು ಮುಂಜಾಗ್ರತೆ ವಹಿಸಬೇಕು. ವೈದ್ಯರಿಗೆ, ನರ್ಸ್ ಮತ್ತು ಇತರ ಸಿಬ್ಬಂದಿಗಳು ಸಾಕಷ್ಟು ಜಾಗರೂಕರಾಗಿರಬೇಕು ಎಂದು ಐಎಂಎ ತಮ್ಮ ಪ್ರಕಟಣೆಯಲ್ಲಿ ಹೇಳಿದೆ.</p>.<p>ವೈದ್ಯರು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ವ್ಯವಸ್ಥೆಗಳ ಬಗ್ಗೆ ಗಮನ ಹರಿಸಬೇಕು. ಸ್ವಚ್ಛತೆ ಮತ್ತು ಸ್ಯಾನಿಟೈಜ್ ಮಾಡುವುದನ್ನು ತಪ್ಪದೇ ಪಾಲಿಸಬೇಕು.</p>.<p>ಹಿರಿಯ ಮತ್ತು ಕಿರಿಯ ವೈದ್ಯರಿಗೆ ಕೊರೊನಾ ಸೋಂಕು ತಗಲುತ್ತಿದೆ. ಆದರೆ ಸಾವಿಗೀಡಾದವರಲ್ಲಿ ಹಿರಿಯರೇ ಹೆಚ್ಚು.ಹಾಗಾಗಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಮತ್ತು ಆಸ್ಪತ್ರೆಯ ಒಳಗೆ ಸಾಕಷ್ಟು ಜಾಗರೂಕರಾಗಿರಬೇಕು ಎಂದು ಐಎಂಎ ಹೇಳಿದೆ.</p>.<p>ಈ ಜಾಗತಿಕ ಪಿಡುಗಿನಿಂದ ಕಾಪಾಡಲು ವೈದ್ಯರೇ ಆಶಾಕಿರಣವಾಗಿದ್ದಾರೆ.ಕೋವಿಡ್-19 ನಿಂದ ವೈದ್ಯರು ಸಾವಿಗೀಡಾಗುತ್ತಿರುವುದು ಆತಂಕದ ಸಂಗತಿ. ರೋಗ ಬಾರದಂತೆ ಸ್ವಯ ರಕ್ಷಣೆ ಮಾಡಿಕೊಳ್ಳುವ ಜತೆಗೆ ಕುಟುಂಬ ಮತ್ತು ಸಹೋದ್ಯೋಗಿಗಳಿಗೂ ಸುರಕ್ಷಿತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಐಎಂಎ ಅಧ್ಯಕ್ಷ ಡಾ. ರಾಜನ್ ಶರ್ಮಾ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>