ವಿಶ್ವಸಂಸ್ಥೆ: ಭಾರತದಲ್ಲಿ ಕೋವಿಡ್ ರೋಗದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯು ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ ಹೆಚ್ಚಾಗಿದೆ. ಇದಕ್ಕೆ ಇಲ್ಲಿನ ತಳ ಮಟ್ಟದ ಆರೋಗ್ಯ ವ್ಯವಸ್ಥೆಯೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾಮಂಡಳಿಯ ಕಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾದ ಒಂದು ತಿಂಗಳ ಬಳಿಕ ಮೊದಲ ಬಾರಿಗೆ ಮೋದಿ ಅವರು ಮಂಡಳಿಯ ಸಭೆಯಲ್ಲಿ ಮಾತನಾಡಿದರು.
‘ಕೋವಿಡ್ ವಿರುದ್ಧದ ಹೋರಾಟವನ್ನು ನಾವು ಜನರ ಚಳವಳಿಯ ರೂಪದಲ್ಲಿ ಸ್ವೀಕರಿಸಿದ್ದೇವೆ. ಸರ್ಕಾರ ಮತ್ತು ಸಮಾಜವು ಅದರ ವಿರುದ್ಧ ಹೋರಾಟ ನಡೆಸುತ್ತಿದೆ’ ಎಂದೂ ಅವರು ಹೇಳಿದ್ದಾರೆ.