ಎಲ್ಎಸಿಯಲ್ಲಿನ ಬಿಕ್ಕಟ್ಟು ಪರಿಹಾರಕ್ಕಾಗಿ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಲು ಎರಡೂ ದೇಶಗಳು ಈ ತಿಂಗಳ ಆರಂಭದಲ್ಲಿ ಒಪ್ಪಿಕೊಂಡಿದ್ದವು. ಆದರೆ, ಈ ಸೈನಿಕರ ವಾಪಸಾತಿ ಪ್ರಕ್ರಿಯೆಯು ಅನಿಶ್ಚಿತವಾಗಿದೆ ಎಂಬುದರ ಸುಳಿವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇತ್ತೀಚೆಗೆ ನೀಡಿದ್ದರು.ಭಾರತದ ಗಡಿಯಲ್ಲಿ ಮಾತ್ರವಲ್ಲದೆ, ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ಕೂಡ ಚೀನಾವು ಆಕ್ರಮಣ
ಕಾರಿ ಧೋರಣೆ ಪ್ರದರ್ಶಿಸಿರುವ ಹೊತ್ತಿನಲ್ಲಿಯೇ ಕವಾಯತು ನಡೆದಿದೆ.