ತಿರುವನಂತಪುರ: ‘ಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರ ಬಿ.ಕಾಂ. ಪದವಿಯ ನಕಲಿ ಪ್ರಮಾಣ ಪತ್ರದ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕೇರಳ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಗೆ ಸ್ವಪ್ನಾ ಸುರೇಶ್ ಅವರು ನಕಲಿ ಪ್ರಮಾಣಪತ್ರ ಸಲ್ಲಿಸಿ ನೇಮಕಾತಿ ಪಡೆದಿದ್ದರು ಎಂದು ಆರೋಪಿಸಲಾಗಿತ್ತು.
‘ಪೊಲೀಸರಿಗೆ ಈ ಬಗ್ಗೆ ದೂರುಗಳನ್ನು ಸಲ್ಲಿಸಲಾಗಿದ್ದು, ತನಿಖೆ ನಡೆಸಲಾಗುವುದು’ ಎಂದು ಪಿಣರಾಯಿ ವಿಜಯನ್ ತಿಳಿಸಿದ್ದಾರೆ.