ಕೊರೊನಾ ಪಿಡುಗಿನ ಕಾರಣದಿಂದಾಗಿ ಈ ಕುರಿತ ನೋಟಿಸ್ ಜಾರಿ ಮಾಡುವಲ್ಲಿ ವಿಳಂಬವಾಗಿದೆ. ಅದಕ್ಕೆ ಇನ್ನಷ್ಟು ಕಾಲಾವಕಾಶ ನೀಡಬೇಕು ಎಂದು ಕೇಂದ್ರವು ಮಾಡಿದ್ದ ಮನವಿಯನ್ನು ಪುರಸ್ಕರಿಸಿದ ಎನ್ಜಿಟಿ ಅಧ್ಯಕ್ಷ, ನ್ಯಾಯಮೂರ್ತಿ ಆದರ್ಶಕುಮಾರ್ ಗೋಯಲ್ ಅವರು ಈ ನಿರ್ದೇಶನ ನೀಡಿದ್ದಾರೆ. ಆದೇಶ ಜಾರಿಗೊಳಿಸುವಲ್ಲಿ ವಿಳಂಬ ಆಗಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.