<p><strong>ಗುವಾಹಟಿ: </strong>ಕೊರೊನಾ ವೈರಸ್ ಸೋಂಕು ಇದೀಗ ಸಮುದಾಯಕ್ಕೂ ಹರಡಿದ್ದು ಗುವಾಹಟಿಯಜನರು ಜಾಗೃತರಾಗಿರಬೇಕು ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ್ ಬಿಸ್ವಾಸ್ ಶರ್ಮಾ ಎಚ್ಚರಿಕೆ ನೀಡಿದ್ದಾರೆ.</p>.<p>ಕಳೆದ 10 ದಿನಗಳಲ್ಲಿ ಅಸ್ಸಾಂ ರಾಜ್ಯದಲ್ಲಿ 4500ಕ್ಕೂ ಹೆಚ್ಚುಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೂ 11 ಸಾವಿರ ಕೊರೊನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ ಕೋವಿಡ್–19 ಪರೀಕ್ಷೆಯನ್ನು ತ್ವರಿತವಾಗಿ ಮಾಡಲಾಗುತ್ತಿದೆ. ಆ್ಯಂಟಿಜೆನ್ ಮಾದರಿಯ ಪರೀಕ್ಷೆಯಲ್ಲಿ ಕೇವಲ ಒಂದು ಗಂಟೆಯಲ್ಲೇ ಫಲಿತಾಂಶ ಬರಲಿದೆ. ಈ ಮೊದಲು ಆರ್ಟಿ–ಪಿಸಿಆರ್ ಮಾದರಿಯ ಪರೀಕ್ಷೆ ನಡೆಸಲಾಗುತ್ತಿತ್ತು. ಇದರ ವರದಿ ಬರಲು 3 ರಿಂದ 4 ದಿನಗಳು ಬೇಕಾಗುತ್ತಿತ್ತು ಎಂದು ಸಚಿವರು ಮಾಹಿತಿ ನೀಡಿದರು.</p>.<p>ರಾಜಧಾನಿ ಗುವಾಹಟಿಯಲ್ಲಿ ಭಾನುವಾರ ಒಂದೇ ದಿನ 770 ಪ್ರಕರಣಗಳು ಪತ್ತೆಯಾದರೇ, ರಾಜ್ಯದಲ್ಲಿ 1200 ಪ್ರಕರಣಗಳು ದಾಖಲಾಗಿವೆ. ಇದು ತುಂಬಾ ಆತಂಕಕಾರಿಯಾಗಿದ್ದು ಸೋಂಕು ಸಮುದಾಯಕ್ಕೆ ಹರಡಿದ್ದು ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ.</p>.<p>ಗುವಾಹಟಿಯಲ್ಲಿ 14 ದಿನಗಳ ಕಠಿಣ ಲಾಕ್ಡೌನ್ ಹೇರಲಾಗಿದ್ದು, ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ದಿನಸಿ ಅಂಗಡಿಗಳು ಮಾತ್ರ ತೆರದಿರುತ್ತವೆ. ಜನರು ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.</p>.<p>ಹೆಚ್ಚು ಹೆಚ್ಚು ಕೋವಿಡ್–19 ಪರೀಕ್ಷೆ ನಡೆಸಲು ಸರ್ಕಾರ ಸಜ್ಜಾಗಿದೆ. ನಾವು ಎಂತಹ ಕಠಿಣ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿದ್ದೇವೆ ಎಂದು ಬಿಸ್ವಾಸ್ ಶರ್ಮಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ: </strong>ಕೊರೊನಾ ವೈರಸ್ ಸೋಂಕು ಇದೀಗ ಸಮುದಾಯಕ್ಕೂ ಹರಡಿದ್ದು ಗುವಾಹಟಿಯಜನರು ಜಾಗೃತರಾಗಿರಬೇಕು ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ್ ಬಿಸ್ವಾಸ್ ಶರ್ಮಾ ಎಚ್ಚರಿಕೆ ನೀಡಿದ್ದಾರೆ.</p>.<p>ಕಳೆದ 10 ದಿನಗಳಲ್ಲಿ ಅಸ್ಸಾಂ ರಾಜ್ಯದಲ್ಲಿ 4500ಕ್ಕೂ ಹೆಚ್ಚುಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೂ 11 ಸಾವಿರ ಕೊರೊನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ ಕೋವಿಡ್–19 ಪರೀಕ್ಷೆಯನ್ನು ತ್ವರಿತವಾಗಿ ಮಾಡಲಾಗುತ್ತಿದೆ. ಆ್ಯಂಟಿಜೆನ್ ಮಾದರಿಯ ಪರೀಕ್ಷೆಯಲ್ಲಿ ಕೇವಲ ಒಂದು ಗಂಟೆಯಲ್ಲೇ ಫಲಿತಾಂಶ ಬರಲಿದೆ. ಈ ಮೊದಲು ಆರ್ಟಿ–ಪಿಸಿಆರ್ ಮಾದರಿಯ ಪರೀಕ್ಷೆ ನಡೆಸಲಾಗುತ್ತಿತ್ತು. ಇದರ ವರದಿ ಬರಲು 3 ರಿಂದ 4 ದಿನಗಳು ಬೇಕಾಗುತ್ತಿತ್ತು ಎಂದು ಸಚಿವರು ಮಾಹಿತಿ ನೀಡಿದರು.</p>.<p>ರಾಜಧಾನಿ ಗುವಾಹಟಿಯಲ್ಲಿ ಭಾನುವಾರ ಒಂದೇ ದಿನ 770 ಪ್ರಕರಣಗಳು ಪತ್ತೆಯಾದರೇ, ರಾಜ್ಯದಲ್ಲಿ 1200 ಪ್ರಕರಣಗಳು ದಾಖಲಾಗಿವೆ. ಇದು ತುಂಬಾ ಆತಂಕಕಾರಿಯಾಗಿದ್ದು ಸೋಂಕು ಸಮುದಾಯಕ್ಕೆ ಹರಡಿದ್ದು ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದ್ದಾರೆ.</p>.<p>ಗುವಾಹಟಿಯಲ್ಲಿ 14 ದಿನಗಳ ಕಠಿಣ ಲಾಕ್ಡೌನ್ ಹೇರಲಾಗಿದ್ದು, ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ದಿನಸಿ ಅಂಗಡಿಗಳು ಮಾತ್ರ ತೆರದಿರುತ್ತವೆ. ಜನರು ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.</p>.<p>ಹೆಚ್ಚು ಹೆಚ್ಚು ಕೋವಿಡ್–19 ಪರೀಕ್ಷೆ ನಡೆಸಲು ಸರ್ಕಾರ ಸಜ್ಜಾಗಿದೆ. ನಾವು ಎಂತಹ ಕಠಿಣ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿದ್ದೇವೆ ಎಂದು ಬಿಸ್ವಾಸ್ ಶರ್ಮಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>