ಈ ಮಧ್ಯೆ, ಭಾನುವಾರ ಬಂಧನಕ್ಕೊಳಗಾಗಿರುವ ಮಲಪ್ಪುರಂ ನಿವಾಸಿ ಕೆ.ಟಿ.ರಮೀಜ್ ಈ ಹಿಂದೆಯೂ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂಬುದು ತಿಳಿದುಬಂದಿದೆ. ರಮೀಜ್ ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಸೂತ್ರಧಾರ ಇರಬಹುದು ಎಂದು ಶಂಕಿಸಲಾಗಿದೆ.