<p><strong>ಕೊಚ್ಚಿ: </strong>ಕೇರಳದ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಯಲಾಗಿದ್ದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.</p>.<p>ಜುಲೈ 5ರಂದು ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕ ಸಾಮಾನು ಸರಂಜಾಮುಗಳನ್ನು ಸಾಗಿಸುತ್ತಿದ್ದಾಗ ₹15 ಕೋಟಿ ಮೌಲ್ಯದ 30 ಕೆ.ಜಿ ಚಿನ್ನವನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಆದರೆ, ಆರೋಪಿಗಳು ಕೇರಳ, ತಮಿಳುನಾಡು ದಾಟಿ ಬೆಂಗಳೂರಿನಲ್ಲಿ ಅಡಗಿದ್ದರು.</p>.<p>ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ನನ್ನು ಬಂಧಿಸಿದ ಎನ್ಐಎ ಭಾನುವಾರ ಬೆಳಿಗ್ಗೆ ಕೊಚ್ಚಿಗೆ ಕರೆತಂದಿತ್ತು. ಎನ್ಐಎ ವಿಶೇಷ ಕೋರ್ಟ್ ಮುಂದೆ ಇಬ್ಬರೂ ಆರೋಪಿಗಳನ್ನು ಹಾಜರು ಪಡಿಸಲಾಯಿತು.</p>.<p>ವಿಚಾರಣೆ ನಡೆಸಲು ಆರೋಪಿಗಳನ್ನು ವಶಕ್ಕೆ ನೀಡುವಂತೆ ಎನ್ಐಎ ಮನವಿ ಸಲ್ಲಿಸಿದ್ದು, ಕೋರ್ಟ್ ಸೋಮವಾರ ಮನವಿ ಪರಿಗಣಿಸಲಿದೆ. ಪ್ರಸ್ತುತ ಕೋರ್ಟ್ ನ್ಯಾಯಾಂಗ ವಶಕ್ಕೆ ಆದೇಶಿಸಿದ್ದು, ಕಡ್ಡಾಯವಾಗಿ ಕೋವಿಡ್–19 ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿರುವುದಾಗಿ ಪಿಟಿಐ ವರದಿ ಮಾಡಿದೆ.</p>.<p><strong>ಇದನ್ನೂ ಓದಿ: </strong><a href="https://cms.prajavani.net/stories/india-news/bjp-congress-question-how-kerala-gold-smuggling-accused-managed-to-cross-states-during-lockdown-744223.html" target="_blank">ಲಾಕ್ಡೌನ್ ವೇಳೆ ಸ್ವಪ್ನಾ ಕೇರಳದಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ಬಂದಿದ್ದು ಹೇಗೆ?</a></p>.<p>ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ಗೆ ತ್ರಿಶ್ಶೂರ್ ಜಿಲ್ಲೆಯಲ್ಲಿ ಹಾಗೂ ಸಂದೀಪ್ ನಾಯರ್ಗೆ ಕರುಕುಟ್ಟಿಯ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗುತ್ತಿದೆ ಎಂದು ಎಎನ್ಐ ಟ್ವೀಟಿಸಿದೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅರಬ್ ಸಂಯುಕ್ತ ರಾಷ್ಟ್ರಗಳ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕಳೆದ ವಾರ ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳು ಕೇರಳ, ತಮಿಳುನಾಡು ಗಡಿ ದಾಟಿ ಬೆಂಗಳೂರು ತಲುಪಿದ್ದರ ಬಗ್ಗೆ ಇತರ ರಾಜಕೀಯ ನಾಯಕರೂ ಅನುಮಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ: </strong>ಕೇರಳದ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಯಲಾಗಿದ್ದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.</p>.<p>ಜುಲೈ 5ರಂದು ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕ ಸಾಮಾನು ಸರಂಜಾಮುಗಳನ್ನು ಸಾಗಿಸುತ್ತಿದ್ದಾಗ ₹15 ಕೋಟಿ ಮೌಲ್ಯದ 30 ಕೆ.ಜಿ ಚಿನ್ನವನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಆದರೆ, ಆರೋಪಿಗಳು ಕೇರಳ, ತಮಿಳುನಾಡು ದಾಟಿ ಬೆಂಗಳೂರಿನಲ್ಲಿ ಅಡಗಿದ್ದರು.</p>.<p>ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ನನ್ನು ಬಂಧಿಸಿದ ಎನ್ಐಎ ಭಾನುವಾರ ಬೆಳಿಗ್ಗೆ ಕೊಚ್ಚಿಗೆ ಕರೆತಂದಿತ್ತು. ಎನ್ಐಎ ವಿಶೇಷ ಕೋರ್ಟ್ ಮುಂದೆ ಇಬ್ಬರೂ ಆರೋಪಿಗಳನ್ನು ಹಾಜರು ಪಡಿಸಲಾಯಿತು.</p>.<p>ವಿಚಾರಣೆ ನಡೆಸಲು ಆರೋಪಿಗಳನ್ನು ವಶಕ್ಕೆ ನೀಡುವಂತೆ ಎನ್ಐಎ ಮನವಿ ಸಲ್ಲಿಸಿದ್ದು, ಕೋರ್ಟ್ ಸೋಮವಾರ ಮನವಿ ಪರಿಗಣಿಸಲಿದೆ. ಪ್ರಸ್ತುತ ಕೋರ್ಟ್ ನ್ಯಾಯಾಂಗ ವಶಕ್ಕೆ ಆದೇಶಿಸಿದ್ದು, ಕಡ್ಡಾಯವಾಗಿ ಕೋವಿಡ್–19 ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿರುವುದಾಗಿ ಪಿಟಿಐ ವರದಿ ಮಾಡಿದೆ.</p>.<p><strong>ಇದನ್ನೂ ಓದಿ: </strong><a href="https://cms.prajavani.net/stories/india-news/bjp-congress-question-how-kerala-gold-smuggling-accused-managed-to-cross-states-during-lockdown-744223.html" target="_blank">ಲಾಕ್ಡೌನ್ ವೇಳೆ ಸ್ವಪ್ನಾ ಕೇರಳದಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ಬಂದಿದ್ದು ಹೇಗೆ?</a></p>.<p>ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ಗೆ ತ್ರಿಶ್ಶೂರ್ ಜಿಲ್ಲೆಯಲ್ಲಿ ಹಾಗೂ ಸಂದೀಪ್ ನಾಯರ್ಗೆ ಕರುಕುಟ್ಟಿಯ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗುತ್ತಿದೆ ಎಂದು ಎಎನ್ಐ ಟ್ವೀಟಿಸಿದೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅರಬ್ ಸಂಯುಕ್ತ ರಾಷ್ಟ್ರಗಳ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕಳೆದ ವಾರ ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳು ಕೇರಳ, ತಮಿಳುನಾಡು ಗಡಿ ದಾಟಿ ಬೆಂಗಳೂರು ತಲುಪಿದ್ದರ ಬಗ್ಗೆ ಇತರ ರಾಜಕೀಯ ನಾಯಕರೂ ಅನುಮಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>