ತಿರುವನಂತಪುರ: ಸಂಗೀತ ನಿರ್ದೇಶಕ ಬಾಲಭಾಸ್ಕರ್ ಸಾವು ಪ್ರಕರಣದ ತನಿಖೆಯನ್ನು ಕೇರಳ ಸರ್ಕಾರ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿದೆ.
2018ರ ಸೆ.25ರಂದು ಬಾಲಭಾಸ್ಕರ್ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ತಿರುವನಂತಪುರದ ಹೊರವಲಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಬಾಲಭಾಸ್ಕರ್ ಹಾಗೂ ಅವರ 2 ವರ್ಷದ ಪುತ್ರಿ ತೇಜಸ್ವಿನಿ ಸಾವನ್ನಪ್ಪಿದ್ದರು.
Kerala Government hands over the death case of musician Balabhaskar (in file pic) to Central Bureau of Investigation (CBI). Balabhaskar and his two-year-old daughter had died on September 25, 2018 in a car accident. pic.twitter.com/WRIzCsaXVp
ಸದ್ಯ ಕೇರಳದಲ್ಲಿ ಚಿನ್ನ ಕಳ್ಳಸಾಗಾಟ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ‘ವಿದೇಶಗಳಲ್ಲಿ ಕಾರ್ಯಕ್ರಮ ನೀಡಲು ಹೋದಾಗ, ಬಾಲಭಾಸ್ಕರ್ಗೆ ಗೊತ್ತಿಲ್ಲದೆಯೇ ಅವರನ್ನು ಗುರಾಣಿಯಾಗಿ ಬಳಸಿಕೊಂಡು ಅವರ ಸ್ನೇಹಿತರು ಕಳ್ಳಸಾಗಾಣಿಕೆ ಮಾಡಿರುವ ಸಾಧ್ಯತೆ ಇದೆ’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.